Featured

ನಾಗಕ್ಷೇತ್ರ ಕುಕ್ಕೆಯಲ್ಲಿ ನಾಗರಹಾವಿನ ಅಂತ್ಯಸಂಸ್ಕಾರಕ್ಕೆ ದೊರಕದ ಸ್ಪಂದನೆ  ; ಮೃತಪಟ್ಟ ನಾಗರಹಾವನ್ನು ದೇವಸ್ಥಾನದ ಆಡಳಿತ ಕಛೇರಿ ಎದುರಿಗಿಟ್ಟು ಪ್ರತಿಭಟನೆ – vishwanews24

ನಾಗಕ್ಷೇತ್ರದಲ್ಲಿ ನಾಗನೇ ಸತ್ತು ಬಿದ್ದಾಗ  ಅರ್ಚಕರು ಸಿಗುತ್ತಿಲ್ಲ: ಸಿಬ್ಬಂದಿಗಳ ವಿರುದ್ದ ಆಕ್ರೋಶ

ಪುತ್ತೂರು : ದೇಶದ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೃತಪಟ್ಟ ನಾಗರಹಾವಿನ ಅಂತ್ಯಸಂಸ್ಕಾರಕ್ಕೆ ಸ್ಪಂದನೆ ದೊರಕದೆ ಭಕ್ತಾಧಿಗಳು ಮೃತಪಟ್ಟ ನಾಗರಹಾವನ್ನು ದೇವಸ್ಥಾನದ ಆಡಳಿತ ಕಛೇರಿ ಎದುರಿಗಿಟ್ಟು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಕುಕ್ಕೆ ಸುಬ್ರಹ್ಮಣ್ಯ ಸಮೀಪದ ರಸ್ತೆಯಲ್ಲಿ ವಾಹನದಡಿಗೆ ಬಿದ್ದು ನಾಗರಹಾವೊಂದು ಸಾವನಪ್ಪಿತ್ತು. ಈ ವಿಚಾರವನ್ನು ಸ್ಥಳೀಯರು ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನದ ಸಿಬ್ಬಂದಿಗಳಿಗೆ ತಿಳಿಸಿದ್ದರು. ಹಾವು ಸತ್ತ ತಕ್ಷಣ ಅದಕ್ಕೆ ಅಂತ್ಯಸಂಸ್ಕಾರ ಮಾಡಬೇಕು ಎನ್ನುವ ಪದ್ಧತಿ ಇರುವ ಕಾರಣ ದೇವಳದ ಸಿಬ್ಬಂದಿಗಳಿಗೆ ವಿಚಾರವನ್ನು ಸ್ಥಳೀಯರು ತಿಳಿಸಿದ್ದರು. ಆದರೆ ದೇವಾಲಯದ ಸಿಬ್ಬಂದಿ ಹಾವು ಸತ್ತು ಒಂದು ಗಂಟೆಯಾದರೂ ಸ್ಥಳಕ್ಕೆ ಆಗಮಿಸದೆ ಅಸಡ್ಡೆ ತೋರಿದ್ದಾರೆ.

ಇದರಿಂದ ರೊಚ್ಚಿಗೆದ್ದ ಸ್ಥಳೀಯರು ಸಾವನಪ್ಪಿದ ಹಾವನ್ನು ಸೀದಾ ಕುಕ್ಕೆ ದೇವಸ್ಥಾನದ ಆಡಳಿತ ಕಛೇರಿ ಎದುರಿಗಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಸರ್ಪಸಂಸ್ಕಾರ ವಿಧಿಗೆ ಹಣ ಕೊಟ್ಟರೆ ಮಾತ್ರ ಅರ್ಚಕರು ಸಿಗುತ್ತಾರೆ, ಆದರೆ ಕ್ಷೇತ್ರದಲ್ಲಿ ಆರಾಧಿಸಲ್ಪಡುವ ನಾಗನೇ ಸತ್ತು ಬಿದ್ದಾಗ ನಿಮಗೆ ಅರ್ಚಕರು ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಜನರು, ನಾಗದೇವರ ಅನ್ನ ತಿಂದೇ ಇಲ್ಲಿ ಎಲ್ಲರೂ ಬದುಕುತ್ತಿರುವುದು, ಆದರೆ ನಾಗನಿಗೆ ಅಂತ್ಯಸಂಸ್ಕಾರ ನಡೆಸಲು ಮಾತ್ರ ಯಾರೂ ಇಲ್ಲ ಎಂದು ಸಿಬ್ಬಂದಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ದೇವಸ್ಥಾನದಲ್ಲಿ ಇಷ್ಟೆಲ್ಲಾ ಸಿಬ್ಬಂದಿಗಳು ಇರೋದು ಯಾಕೆ ಎಂದು ಕ್ಷೇತ್ರದ ಸಿಬ್ಬಂದಿಗಳ ವಿರುದ್ದ ಸ್ಥಳೀಯರು ಹರಿಹಾಯ್ದಿದ್ದಾರೆ.

ಕೊನೆಗೆ ಪುತ್ತೂರು ಸಹಾಯಕ ಆಯುಕ್ತರಿಗೆ ಕರೆ ಮಾಡಿದಾಗ ಅವರು ಸ್ಪಂದಿಸಿದ್ದಾರೆ. ಸಹಾಯಕ ಆಯುಕ್ತರ ಆದೇಶದ ಬಳಿಕವೇ ನಾಗನಿಗೆ ಅಂತ್ಯಸಂಸ್ಕಾರ ಅರ್ಚಕರು ನೇರವೇರಿಸಿದ್ದಾರೆ.

Vishwa News 24

Recent Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

2 hours ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

2 hours ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

2 hours ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

2 hours ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

2 hours ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

2 hours ago