ಮಂಡ್ಯ: ಗಣೇಶ ವಿಸರ್ಜನೆ ವೇಳೆ ನಾಗಮಂಗಲದ ಗಲಭೆ ವಿಚಾರಕ್ಕೆ ಸಂಬಂಧಿಸಿಂತೆ ಶುಕ್ರವಾರ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ನಾಗಮಂಗಲಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಾಗಮಂಗಲದ ಇಡೀ ಘಟನೆ ಕಾಂಗ್ರೆಸ್ ಪ್ರಾಯೋಜಿತ ಕಾರ್ಯಕ್ರಮವಷ್ಟೇ. 1990ರಲ್ಲಿ ವಿರೇಂದ್ರ ಪಾಟೀಲರನ್ನು ಸಿಎಂ ಕುರ್ಚಿಯಿಂದ ಕೆಳಗೆ ಇಳಿಸಲು ಗಲಭೆ ನಡೆಸಿದಂತೆ ಸಿದ್ದರಾಮಯ್ಯರನ್ನ ಸಿಎಂ ಕುರ್ಚಿಯಿಂದ ಕೆಳಗೆ ಇಳಿಸಲು ಕಾಂಗ್ರೆಸ್ನಲ್ಲೇ ನಡೆಸಿರುವ ಸಂಚು ಎಂದು ಹೊಸ ಬಾಂಬ್ ಹಾಕಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗದಲ್ಲಿ ನಡೆದಿರುವ ಕೋಮು ದಳ್ಳೂರಿ ಈಗ ರಾಜಕೀಯ ತಿರುವು ಪಡೆದುಕೊಂಡಿದೆ. ನಿನ್ನೆ ಗುರುವಾರವಷ್ಟೆ ಬಿಜೆಪಿ ನಿಯೋಗ ಭೇಟಿ ನೀಡಿ ಹೋಗಿತ್ತು. ಆ ವೇಳೆ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದ ಬಿಜೆಪಿ ನಾಯಕರು ನಾಗಮಂಗಲದ ಗಲಭೆಯನ್ನ ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಗುಡುಗಿದ್ದರು.
ಶುಕ್ರವಾರ ನಾಗಮಂಗಲಕ್ಕೆ ಆಗಮಿಸಿದ್ದ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಗಲಭೆಯಲ್ಲಿ ಹಾನಿಗೊಳಗಾಗಿರುವ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ತಮ್ಮ ತಮ್ಮ ಅಂಗಡಿ ಮುಂಗ್ಗಟ್ಟುಗಳನ್ನು ಕಳೆದುಕೊಂಡಿದ್ದ ಜನರು ಕುಮಾರಸ್ವಾಮಿ ಬಳಿ ತಮ್ಮ ನೋವನ್ನು ತೊಡಿಕೊಂಡರು. ನಾಗಮಂಗಲದ ಕೋಮು ದಳ್ಳುರಿಯನ್ನು ಕಣ್ಣಾರೆ ಕಂಡ ಕುಮಾರಸ್ವಾಮಿ ಇಡೀ ಗಲಭೆ ಕಾಂಗ್ರೆಸ್ ಪ್ರಾಯೋಜಿತ ಕಾರ್ಯಕ್ರಮ ಎಂದು ನೇರವಾಗಿ ಆರೋಪ ಮಾಡಿದರು. 1990 ರಲ್ಲಿ ವೀರೇಂದ್ರ ಪಾಟೀಲರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಲು ಗಲಭೆ ನಡೆಸಿದಂತೆ ಸಿದ್ದರಾಮಯ್ಯರನ್ನು ಕೆಳಗೆ ಇಳಿಸಲು ಕಾಂಗ್ರೆಸ್ ಪಕ್ಷವೇ ನಡೆಸಿರೊ ಷಡ್ಯಂತ್ರ ಇದಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಯಾವ ತನಿಖೆಯನ್ನಾದರು ಮಾಡಲಿ ಎಂದು ಗುಡುಗಿದರು.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…