Featured

ನಾಗಮಂಗಲ ಗಲಭೆ : ಎನ್.ಐ. ಎ. ತನಿಖೆಗೆ ವಹಿಸಿ : ರಾಜ್ಯ ಸರ್ಕಾರಕ್ಕೆ ಯಶ್ಪಾಲ್ ಸುವರ್ಣ ಆಗ್ರಹ – vishwanews24

ನಾಗಮಂಗಲ ಗಲಭೆ ಎನ್.ಐ. ಎ. ತನಿಖೆಗೆ ವಹಿಸಿ : ರಾಜ್ಯ ಸರ್ಕಾರಕ್ಕೆ ಯಶ್ಪಾಲ್ ಸುವರ್ಣ ಆಗ್ರಹ

ಉಡುಪಿ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಮತಾಂಧ ಮುಸ್ಲಿಂ ಮತೀಯವಾದಿಗಳು ಪೆಟ್ರೋಲ್ ಬಾಂಬ್, ಕಲ್ಲುತೂರಾಟ ನಡೆಸಿ ಹಿಂಸಾಚಾರ ಅಶಾಂತಿ ಸೃಷ್ಟಿಸಿದ ಘಟನೆಯನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿ ರಾಷ್ಟೀಯ ತನಿಖಾ ದಳಕ್ಕೆ ವಹಿಸುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ ಮಾಡಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವುದಕ್ಕೆ ನಾಗಮಂಗಲ ಘಟನೆ ಜ್ವಲಂತ ನಿದರ್ಶನವಾಗಿದ್ದು, ಕಾಂಗ್ರೆಸ್ ಸರಕಾರದ ಮುಸ್ಲಿಂ ಓಲೈಕೆಯಿಂದ ಜಿಹಾದಿ ಮಾನಸಿಕತೆಯ ಶಕ್ತಿಗಳು ಸಮಾಜಘಾತುಕ ಕೃತ್ಯಗಳನ್ನು ರಾಜಾರೋಷವಾಗಿ ನಡೆಸುತ್ತಿವೆ.

ಸಾರ್ವಜನಿಕ ರಸ್ತೆಯಲ್ಲಿ ನಮಾಜ್ ಮಾಡಿ ಸಂಚಾರಕ್ಕೆ ತಡೆ ಮಾಡುವ ಮತೀಯವಾದಿಗಳು, ಗಣೇಶ ವಿಸರ್ಜನಾ ಮೆರವಣಿಗೆ ತಮ್ಮ ಮಸೀದಿಯ ಬಳಿ ಸಾಗಲು ತಡೆ ಒಡ್ಡಿ ಪೂರ್ವಯೋಜಿತವಾಗಿ ಪೆಟ್ರೋಲ್ ಬಾಂಬ್, ಕಲ್ಲು ತೂರಾಟ ನಡೆಸಿ ಬಹುಸಂಖ್ಯಾತ ಹಿಂದೂ ಸಮುದಾಯವನ್ನು ಕೆಣಕುವ ದುಸ್ಸಾಹಸಕ್ಕೆ ಮುಂದಾಗಿದ್ದಾರೆ.

ರಾಜ್ಯ ಸರ್ಕಾರ ಕೂಡಲೇ ಗಲಭೆ ಕೋರರನ್ನು ತಕ್ಷಣ ಬಂಧಿಸಿ, ಈ ಭಯೋತ್ಪಾದಕ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯದಲ್ಲಿ ರಾಮೇಶ್ವರಂ ಬಾಂಬ್ ಬ್ಲಾಸ್ಟ್, ಬಿಜೆಪಿ ಕಛೇರಿ ಸ್ಫೋಟಿಸಲು ಉದ್ದೇಶಿಸಿದ್ದ ಉಗ್ರ ಚಟುವಟಿಕೆಯ ಹಿನ್ನಲೆಯಲ್ಲಿ ಉನ್ನತ ಮಟ್ಟದ ತನಿಖೆಗಾಗಿ ಎನ್ ಐ ಎ ಗೆ ವಹಿಸುವಂತೆ ಯಶ್ ಪಾಲ್ ಸುವರ್ಣ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

31 minutes ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

3 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

3 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

4 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

4 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

4 hours ago