Featured

ನಾಗಾಲ್ಯಾಂಡ್‌ ಎನ್‌ಡಿಪಿಪಿ- ಬಿಜೆಪಿ ಸರ್ಕಾರಕ್ಕೆ ಬೆಂಬಲ ಘೋಷಿಸಿದ ಶರದ್ ಪವಾರ್ – VIshwanews24

ನಾಗಾಲ್ಯಾಂಡ್‌ನಲ್ಲಿ ಎನ್‌ಡಿಪಿಪಿ- ಬಿಜೆಪಿ ಸರ್ಕಾರಕ್ಕೆ ಬೆಂಬಲ ಘೋಷಿಸಿದ ಶರದ್ ಪವಾರ್

ಹೊಸದಿಲ್ಲಿ: ಮಹಾರಾಷ್ಟ್ರ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಬಿಜೆಪಿಯ ಪ್ರಬಲ ವಿರೋಧಿಗಳಲ್ಲಿ ಶರದ್ ಪವಾರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಒಂದು. ಆದರೆ ನಾಗಾಲ್ಯಾಂಡ್‌ನಲ್ಲಿ ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ಎನ್‌ಡಿಪಿಪಿ) ಹಾಗೂ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಎನ್‌ಸಿಪಿ ತನ್ನ ಬೆಂಬಲ ಪ್ರಕಟಿಸುವ ಮೂಲಕ ಅಚ್ಚರಿ ಮೂಡಿಸಿದೆ. ಇದರೊಂದಿಗೆ ಈಶಾನ್ಯದ ರಾಜ್ಯವು ಮತ್ತೊಮ್ಮೆ ವಿರೋಧ ಪಕ್ಷವಿಲ್ಲದ ಸರ್ಕಾರ ಕಾಣುತ್ತಿದೆ.

ಇತ್ತೀಚೆಗೆ ನಡೆದ ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದಿರಲಿಲ್ಲ. ಎನ್‌ಡಿಪಿಪಿ 25, ಬಿಜೆಪಿ 12 ಸ್ಥಾನಗಳಲ್ಲಿ ಗೆಲುವು ಕಂಡಿದ್ದವು. ಹೀಗೆ ಮೈತ್ರಿ ಸರ್ಕಾರ ಮತ್ತೆ ಅಸ್ತಿತ್ವಕ್ಕೆ ಬಂದಿತ್ತು. ಮಂಗಳವಾರ ನಡೆದ ಸಮಾರಂಭದಲ್ಲಿ ನೀಫಿಯು ರಿಯೊ ಅವರು ಐದನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಜತೆಗೆ ಎನ್‌ಡಿಪಿಪಿಯ ಏಳು ಹಾಗೂ ಬಿಜೆಪಿಯ ಐವರು ಶಾಸಕರು ಸಚಿವರಾಗಿ ಸಂಪುಟಕ್ಕೆ ಸೇರ್ಪಡೆಯಾಗಿದ್ದರು.

“ನಾಗಾಲ್ಯಾಂಡ್‌ನ ಎನ್‌ಸಿಪಿ ಸ್ಥಳೀಯ ಘಟಕ ಹಾಗೂ ಹೊಸದಾಗಿ ಚುನಾಯಿತರಾದ ಶಾಸಕರು, ನಾಗಾಲ್ಯಾಂಡ್ ರಾಜ್ಯದ ಹಿತಾಸಕ್ತಿ ಮತ್ತು ಎನ್‌ಡಿಪಿಪಿ ಮುಖ್ಯಸ್ಥ ಹಾಗೂ ನಾಗಾಲ್ಯಾಂಡ್ ಮುಖ್ಯಮಂತ್ರಿ ನೀಫಿಯು ರಿಯೊ ಅವರ ಜತೆಗಿನ ನಮ್ಮ ಉತ್ತಮ ಸಂಬಂಧದ ಸಲುವಾಗಿ, ಅವರ ನೇತೃತ್ವದ ಸರ್ಕಾರದ ಭಾಗವಾಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ನಾಗಾಲ್ಯಾಂಡ್ ಸರ್ಕಾರದ ಭಾಗವಾಗಬೇಕೇ ಅಥವಾ ಬೇಡವೇ ಎನ್ನುವುದು ಎನ್‌ಸಿಪಿ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ಅವರ ತೀರ್ಮಾನಕ್ಕೆ ಬಿಟ್ಟ ವಿಷಯವಾಗಿತ್ತು. ಈಶಾನ್ಯ ರಾಜ್ಯ ಉಸ್ತುವಾರಿಯ ಮಾಹಿತಿಯನ್ನು ಆಲಿಸಿದ ಬಳಿಕ ಮಂಗಳವಾರ ಬೆಳಿಗ್ಗೆ ಅವರು ಈ ಬೇಡಿಕೆಯನ್ನು ಒಪ್ಪಿಕೊಂಡಿದ್ದಾರೆ” ಎಂದು ವರ್ಮಾ ತಿಳಿಸಿದ್ದಾರೆ

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

2 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

4 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

5 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

5 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

5 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

6 hours ago