ಹೊಸದಿಲ್ಲಿ: ಮಹಾರಾಷ್ಟ್ರ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಬಿಜೆಪಿಯ ಪ್ರಬಲ ವಿರೋಧಿಗಳಲ್ಲಿ ಶರದ್ ಪವಾರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ) ಒಂದು. ಆದರೆ ನಾಗಾಲ್ಯಾಂಡ್ನಲ್ಲಿ ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ಎನ್ಡಿಪಿಪಿ) ಹಾಗೂ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಎನ್ಸಿಪಿ ತನ್ನ ಬೆಂಬಲ ಪ್ರಕಟಿಸುವ ಮೂಲಕ ಅಚ್ಚರಿ ಮೂಡಿಸಿದೆ. ಇದರೊಂದಿಗೆ ಈಶಾನ್ಯದ ರಾಜ್ಯವು ಮತ್ತೊಮ್ಮೆ ವಿರೋಧ ಪಕ್ಷವಿಲ್ಲದ ಸರ್ಕಾರ ಕಾಣುತ್ತಿದೆ.
ಇತ್ತೀಚೆಗೆ ನಡೆದ ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದಿರಲಿಲ್ಲ. ಎನ್ಡಿಪಿಪಿ 25, ಬಿಜೆಪಿ 12 ಸ್ಥಾನಗಳಲ್ಲಿ ಗೆಲುವು ಕಂಡಿದ್ದವು. ಹೀಗೆ ಮೈತ್ರಿ ಸರ್ಕಾರ ಮತ್ತೆ ಅಸ್ತಿತ್ವಕ್ಕೆ ಬಂದಿತ್ತು. ಮಂಗಳವಾರ ನಡೆದ ಸಮಾರಂಭದಲ್ಲಿ ನೀಫಿಯು ರಿಯೊ ಅವರು ಐದನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಜತೆಗೆ ಎನ್ಡಿಪಿಪಿಯ ಏಳು ಹಾಗೂ ಬಿಜೆಪಿಯ ಐವರು ಶಾಸಕರು ಸಚಿವರಾಗಿ ಸಂಪುಟಕ್ಕೆ ಸೇರ್ಪಡೆಯಾಗಿದ್ದರು.
“ನಾಗಾಲ್ಯಾಂಡ್ನ ಎನ್ಸಿಪಿ ಸ್ಥಳೀಯ ಘಟಕ ಹಾಗೂ ಹೊಸದಾಗಿ ಚುನಾಯಿತರಾದ ಶಾಸಕರು, ನಾಗಾಲ್ಯಾಂಡ್ ರಾಜ್ಯದ ಹಿತಾಸಕ್ತಿ ಮತ್ತು ಎನ್ಡಿಪಿಪಿ ಮುಖ್ಯಸ್ಥ ಹಾಗೂ ನಾಗಾಲ್ಯಾಂಡ್ ಮುಖ್ಯಮಂತ್ರಿ ನೀಫಿಯು ರಿಯೊ ಅವರ ಜತೆಗಿನ ನಮ್ಮ ಉತ್ತಮ ಸಂಬಂಧದ ಸಲುವಾಗಿ, ಅವರ ನೇತೃತ್ವದ ಸರ್ಕಾರದ ಭಾಗವಾಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ನಾಗಾಲ್ಯಾಂಡ್ ಸರ್ಕಾರದ ಭಾಗವಾಗಬೇಕೇ ಅಥವಾ ಬೇಡವೇ ಎನ್ನುವುದು ಎನ್ಸಿಪಿ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ಅವರ ತೀರ್ಮಾನಕ್ಕೆ ಬಿಟ್ಟ ವಿಷಯವಾಗಿತ್ತು. ಈಶಾನ್ಯ ರಾಜ್ಯ ಉಸ್ತುವಾರಿಯ ಮಾಹಿತಿಯನ್ನು ಆಲಿಸಿದ ಬಳಿಕ ಮಂಗಳವಾರ ಬೆಳಿಗ್ಗೆ ಅವರು ಈ ಬೇಡಿಕೆಯನ್ನು ಒಪ್ಪಿಕೊಂಡಿದ್ದಾರೆ” ಎಂದು ವರ್ಮಾ ತಿಳಿಸಿದ್ದಾರೆ
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…