ಬೆಂಗಳೂರು: ನಾಗೇಂದ್ರ ಸಂಪೂರ್ಣ ನಿರಪರಾಧಿಯಾಗಿದ್ದು, ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ ರಾಜ್ಯದ ಜನತೆಗೆ ತೀವ್ರ ನೋವುಂಟುಮಾಡಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ನಾನೇ ಖುದ್ದಾಗಿ ಈ ಪ್ರಕರಣದ ಎಲ್ಲಾ ವರದಿಗಳನ್ನು ಪರಿಶೀಲನೆ ನಡೆಸಿದ್ದೇನೆ, ಸಂಬಂಧಪಟ್ಟವರೊಂದಿಗೆ ಚರ್ಚಿಸಿದ್ದೇನೆ. ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ” ಎಂದರು.
“4 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಒಬ್ಬ ದಲಿತ ನಾಯಕನನ್ನು ಬಲವಂತವಾಗಿ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಕೆಲಸವನ್ನು ಬಿಜೆಪಿ ಮಾಡಿದೆ. ಇದು ಕೇವಲ ನಾಗೇಂದ್ರ ಅವರಿಗೆ ಮಾಡಿದ ಅವಮಾನವಲ್ಲ, ರಾಜ್ಯದ ಬಡವರು ಹಾಗೂ ಸಾರ್ವಜನಿಕರ ಮನಸ್ಸಿಗೆ ಭಾರಿ ನೋವುಂಟುಮಾಡಿದೆ” ಎಂದು ಹೇಳಿದರು.
“ಸರ್ಕಾರವಾಗಲಿ ಅಥವಾ ನಮ್ಮ ಪಕ್ಷವಾಗಲಿ ಯಾವುದೇ ಕಾರಣಕ್ಕೂ ಮಣಿದಿಲ್ಲ. ನಾಗೇಂದ್ರ ಅವರು ನಮ್ಮ ಪಕ್ಷದ ನಿಷ್ಠಾವಂತ ನಾಯಕ ಹಾಗೂ ಕಾರ್ಯಕರ್ತ. ತಮ್ಮ ಮೇಲಿನ ಆರೋಪಗಳಿಂದ ಸರ್ಕಾರ ಮತ್ತು ಪಕ್ಷಕ್ಕೆ ಯಾವುದೇ ಮುಜುಗರ ಉಂಟಾಗಬಾರದು ಎಂಬ ಒಂದೇ ಕಾರಣಕ್ಕೆ ಅವರು ಸ್ವಯಂಪ್ರೇರಿತರಾಗಿ ಈ ನಿರ್ಧಾರ ತಳೆದಿದ್ದಾರೆ” ಎಂದು ತಿಳಿಸಿದರು.
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…
ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಸರ್ಕಾರಿ ರಜೆ ಘೋಷಣೆಗೆ ಮನವಿ ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ದಿನವನ್ನು ಸರ್ಕಾರಿ ರಜಾದಿನವಾಗಿ ಘೋಷಿಸುವಂತೆ…
ನೇಪಾಳ ಪ್ರವಾಹ: ಸಾವಿನ ಸಂಖ್ಯೆ 626 ಕ್ಕೆ ಏರಿಕೆ , 2500ಕ್ಕೂ ಹೆಚ್ಚು ಮಂದಿ ನಾಪತ್ತೆ ಕಠ್ಮಂಡು: ನೇಪಾಳ-ಚೀನಾ ಗಡಿಯ…
ನಾಗೇಂದ್ರ ರಾಜೀನಾಮೆ ಬಿಜೆಪಿ-ಜೆಡಿಎಸ್ ಹೋರಾಟದ ಫಲ: ಆರ್. ಅಶೋಕ್ ಬೆಂಗಳೂರು: ನಿರ್ಗಮಿತ ಸಚಿವ ಬಿ. ನಾಗೇಂದ್ರ ರಾಜೀನಾಮೆ ಬಿಜೆಪಿ –…
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…