ಉಡುಪಿ: ಹೆಬ್ರಿ ತಾಲೂಕಿನ ಮುದ್ರಾಡಿ ಬರ್ಸಬೆಟ್ಟುವಿನಲ್ಲಿ ಭಾನುವಾರ ಜ್ಯೋತಿಷಿಯೊಬ್ಬರು ಪ್ರಶ್ನಾ ಚಿಂತನೆಯಲ್ಲಿ ನೀಡಿದ್ದ ಮಾಹಿತಿ ಅನುಸರಿಸಿ ಮನೆಯ ವರಾಂಡ ಅಗೆದಾಗ 6 ಅಡಿ ಆಳದಲ್ಲಿ ನಾಗನ ಕಲ್ಲು ಪತ್ತೆಯಾಗಿದೆ.
ಮುಂಬಯಿ ಉದ್ಯಮಿ ಗಂಗಾಧರ ಶೆಟ್ಟಿ ತಮ್ಮ ಹಳೇ ಮನೆ ಕೆಡವಿ ಹೊಸ ಮನೆ ಕಟ್ಟಿದ್ದರು. ಮನೆ ನಿರ್ಮಿಸಿದ ಬಳಿಕ ಜೀವನದಲ್ಲಿ ವಿಪರೀತ ಸಮಸ್ಯೆಗಳು ಕಾಣಿಸಿಕೊಂಡು ಉದ್ಯಮ ನಷ್ಟದ ಹಾದಿ ಹಿಡಿಯಿತು.ತುಂಬಾ ನೊಂದಿದ್ದ ಗಂಗಾಧರ ಶೆಟ್ಟಿಯವರು ತಮ್ಮ ಸ್ನೇಹಿತರ ಸೂಚನೆಯಂತೆ ಧಾರ್ಮಿಕ ಚಿಂತಕ ತೀರ್ಥಹಳ್ಳಿಯ ಆರಗ ಅಗ್ರಹಾರ ನಾಗರಾಜ್ ಭಟ್ಟರಲ್ಲಿ ಹೋದರು.ನಾಗರಾಜ್ ಭಟ್ ಪ್ರಶ್ನೆ ಹಾಕಿ ನೋಡುವಾಗ ಮನೆಯ ಹಾಲಿನ ಒಳಗ ನಾಗ ದೇವರ ಕಲ್ಲು ಇದೆ’ ಅದರ ಮೇಲೆ ಮನೆ ಕಟ್ಟಿದ್ದಿರಿ’ಅದೇ ಈ ತೊಂದರೆಗೆಲ್ಲಾ ಕಾರಣ,ಅದನ್ನು ಮೇಲೆ ತೆಗೆದು,ಆ ಮೂರ್ತಿಗೆ ಪೂಜೆಯನ್ನು ಮಾಡಬೇಕು ಎಂದು ಹೇಳಿದರು.
ನಾಗರಾಜ್ ಭಟ್ ಮನೆಯ ಒಳಗೆ ಬಂದು ಹಾಲಿನಲ್ಲಿ ಸ್ಥಳ ತೋರಿಸಿ ಅಗೆಯಲು ಹೇಳಿದರು. ಆಗ ಅದೇ ಸ್ಥಳದಲ್ಲಿ ಅಗೆಯುವಾಗ ಆರು ಅಡಿಯಲ್ಲಿ ಪುರಾತನ ಜೈನರ ಕಾಲದ ನಾಗದೇವರ ಕಲ್ಲು ದೊರಕಿದೆ.ಮನೆಯವರಿಗೆ ಮತ್ತು ಅಲ್ಲಿ ನೆರದಿದ್ದ ಜನರಿಗೆ ಆಶ್ಚರ್ಯಕರವಾಗಿದೆ.ನಾಗರಾಜ್ ಭಟ್ಟರ ಪ್ರಕಾರ: ‘ಹಿಂದೆ ಆ ಪರಿಸರದಲ್ಲಿ ಜೈನರ ಆಳ್ವಿಕೆ ಇತ್ತು.ಅಲ್ಲಿ ಕೆಲವು ದೇವಾಲಯಗಳಿದ್ದವು, ಅವುಗಳು ನಾಶವಾಗಿದೆ ಎಂದು ಹೇಳಿದರು.
ನಿಜಕ್ಕೂ ಆಶ್ಚರ್ಯವಾಯಿತು. ಮನೆಯ ಮಧ್ಯದ ಹಾಲ್ನಲ್ಲಿ ನಾಗನ ಕಲ್ಲು ದೊರೆತಿದೆ. ನಾಗನಕಲ್ಲನ್ನು ತುಳಸಿಕಟ್ಟೆ ಸಮೀಪದ ಇಟ್ಟಿದ್ದೇವೆ. ಜ.14ರ ಬಳಿಕ ಹಳೇ ಕಲ್ಲು ವಿಸರ್ಜನೆ ಮಾಡಿ, ಹೊಸ ಕಲ್ಲು ಪ್ರತಿಷ್ಠಾಪಿಸಲಾಗುವುದು.
ಗಂಗಾಧರ ಶೆಟ್ಟಿ, ಮನೆ ಮಾಲೀಕರು
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…