ಉಡುಪಿ: ಹೆಬ್ರಿ ತಾಲೂಕಿನ ಮುದ್ರಾಡಿ ಬರ್ಸಬೆಟ್ಟುವಿನಲ್ಲಿ ಭಾನುವಾರ ಜ್ಯೋತಿಷಿಯೊಬ್ಬರು ಪ್ರಶ್ನಾ ಚಿಂತನೆಯಲ್ಲಿ ನೀಡಿದ್ದ ಮಾಹಿತಿ ಅನುಸರಿಸಿ ಮನೆಯ ವರಾಂಡ ಅಗೆದಾಗ 6 ಅಡಿ ಆಳದಲ್ಲಿ ನಾಗನ ಕಲ್ಲು ಪತ್ತೆಯಾಗಿದೆ.
ಮುಂಬಯಿ ಉದ್ಯಮಿ ಗಂಗಾಧರ ಶೆಟ್ಟಿ ತಮ್ಮ ಹಳೇ ಮನೆ ಕೆಡವಿ ಹೊಸ ಮನೆ ಕಟ್ಟಿದ್ದರು. ಮನೆ ನಿರ್ಮಿಸಿದ ಬಳಿಕ ಜೀವನದಲ್ಲಿ ವಿಪರೀತ ಸಮಸ್ಯೆಗಳು ಕಾಣಿಸಿಕೊಂಡು ಉದ್ಯಮ ನಷ್ಟದ ಹಾದಿ ಹಿಡಿಯಿತು.ತುಂಬಾ ನೊಂದಿದ್ದ ಗಂಗಾಧರ ಶೆಟ್ಟಿಯವರು ತಮ್ಮ ಸ್ನೇಹಿತರ ಸೂಚನೆಯಂತೆ ಧಾರ್ಮಿಕ ಚಿಂತಕ ತೀರ್ಥಹಳ್ಳಿಯ ಆರಗ ಅಗ್ರಹಾರ ನಾಗರಾಜ್ ಭಟ್ಟರಲ್ಲಿ ಹೋದರು.ನಾಗರಾಜ್ ಭಟ್ ಪ್ರಶ್ನೆ ಹಾಕಿ ನೋಡುವಾಗ ಮನೆಯ ಹಾಲಿನ ಒಳಗ ನಾಗ ದೇವರ ಕಲ್ಲು ಇದೆ’ ಅದರ ಮೇಲೆ ಮನೆ ಕಟ್ಟಿದ್ದಿರಿ’ಅದೇ ಈ ತೊಂದರೆಗೆಲ್ಲಾ ಕಾರಣ,ಅದನ್ನು ಮೇಲೆ ತೆಗೆದು,ಆ ಮೂರ್ತಿಗೆ ಪೂಜೆಯನ್ನು ಮಾಡಬೇಕು ಎಂದು ಹೇಳಿದರು.
ನಾಗರಾಜ್ ಭಟ್ ಮನೆಯ ಒಳಗೆ ಬಂದು ಹಾಲಿನಲ್ಲಿ ಸ್ಥಳ ತೋರಿಸಿ ಅಗೆಯಲು ಹೇಳಿದರು. ಆಗ ಅದೇ ಸ್ಥಳದಲ್ಲಿ ಅಗೆಯುವಾಗ ಆರು ಅಡಿಯಲ್ಲಿ ಪುರಾತನ ಜೈನರ ಕಾಲದ ನಾಗದೇವರ ಕಲ್ಲು ದೊರಕಿದೆ.ಮನೆಯವರಿಗೆ ಮತ್ತು ಅಲ್ಲಿ ನೆರದಿದ್ದ ಜನರಿಗೆ ಆಶ್ಚರ್ಯಕರವಾಗಿದೆ.ನಾಗರಾಜ್ ಭಟ್ಟರ ಪ್ರಕಾರ: ‘ಹಿಂದೆ ಆ ಪರಿಸರದಲ್ಲಿ ಜೈನರ ಆಳ್ವಿಕೆ ಇತ್ತು.ಅಲ್ಲಿ ಕೆಲವು ದೇವಾಲಯಗಳಿದ್ದವು, ಅವುಗಳು ನಾಶವಾಗಿದೆ ಎಂದು ಹೇಳಿದರು.
ನಿಜಕ್ಕೂ ಆಶ್ಚರ್ಯವಾಯಿತು. ಮನೆಯ ಮಧ್ಯದ ಹಾಲ್ನಲ್ಲಿ ನಾಗನ ಕಲ್ಲು ದೊರೆತಿದೆ. ನಾಗನಕಲ್ಲನ್ನು ತುಳಸಿಕಟ್ಟೆ ಸಮೀಪದ ಇಟ್ಟಿದ್ದೇವೆ. ಜ.14ರ ಬಳಿಕ ಹಳೇ ಕಲ್ಲು ವಿಸರ್ಜನೆ ಮಾಡಿ, ಹೊಸ ಕಲ್ಲು ಪ್ರತಿಷ್ಠಾಪಿಸಲಾಗುವುದು.
ಗಂಗಾಧರ ಶೆಟ್ಟಿ, ಮನೆ ಮಾಲೀಕರು
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…