Featured

ನಾಡದೋಣಿ ಮೀನುಗಾರಿಕೆ ಸೀಮೆ ಎಣ್ಣೆ ಸಮರ್ಪಕ ವಿತರಣೆಗೆ ಕ್ರಮ : ಯಶ್ ಪಾಲ್ ಸುವರ್ಣ -Vishwanews24

ನಾಡದೋಣಿ ಮೀನುಗಾರಿಕೆ ಸೀಮೆ ಎಣ್ಣೆ ಸಮರ್ಪಕ ವಿತರಣೆಗೆ ಕ್ರಮ : ಯಶ್ ಪಾಲ್ ಸುವರ್ಣ

ನಾಡ ದೋಣಿ ಮೀನುಗಾರಿಕೆ ಬಳಕೆಯ ಸೀಮೆ ಎಣ್ಣೆ ಅಸಮರ್ಪಕ ವಿತರಣೆಯಿಂದ ನಾಡ ದೋಣಿ ಮೀನುಗಾರರು ಎದುರಿಸುತ್ತಿರುವ ಸಮಸ್ಯೆಗೆ ಪರಿಹಾರ ಕಲ್ಪಿಸಿ ನಿರಂತರ ಸೀಮೆ ಎಣ್ಣೆ ಪೂರೈಕೆಗೆ ಸರಕಾರ ಕ್ರಮ ಕೈಗೊಂಡಿರುವುದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರಕಾರ ನಾಡದೋಣಿ ಮೀನುಗಾರಿಕೆ ಸೀಮೆ ಎಣ್ಣೆ ವಿತರಣೆಗೆ ಅನುದಾನ ಮಂಜೂರು ಮಾಡಿದೆ. ಇಂಧನ ಕಂಪೆನಿಗಳಲ್ಲಿ ನಿಗದಿತ ಪ್ರಮಾಣದಲ್ಲಿ
ಸೀಮೆ ಎಣ್ಣೆ ದಾಸ್ತಾನು ಕೊರತೆ ಉಂಟಾದ ಪರಿಣಾಮ ಸೀಮೆ ಎಣ್ಣೆ ವಿತರಣೆಯಲ್ಲಿ ವ್ಯತ್ಯಾಸ ಉಂಟಾಗಿದೆ.
ನಾಡ ದೋಣಿ ಮೀನುಗಾರರ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಸರಕಾರ ಶನಿವಾರದಿಂದಲೇ ಕೈಗಾರಿಕಾ ಬಳಕೆಯ ಸೀಮೆ ಎಣ್ಣೆಯನ್ನು ಅವಶ್ಯಕತೆ ಇದ್ದಲ್ಲಿ ನಾಡ ದೋಣಿ ಮೀನುಗಾರರಿಗೆ ಮೀಸಲಿರಿಸುವ ಬಗ್ಗೆ ಪ್ರಕ್ರಿಯೆಗೆ ಮುಂದಾಗಿದೆ.
ಈಗಾಗಲೇ ಮೀನುಗಾರಿಕೆ ಬಳಕೆಯ ಸೀಮೆ ಎಣ್ಣೆ ಆಹಾರ ಸರಬರಾಜು ಇಲಾಖೆಯ ಮೂಲಕ ವಿತರಣೆಯಾಗುತ್ತಿದ್ದು ಕೆಲವು ತಾಂತ್ರಿಕ ಸಮಸ್ಯೆಗಳಿಂದ ಸಮರ್ಪಕ ರೀತಿಯಲ್ಲಿ ವಿತರಣೆ ನಡೆಯುತ್ತಿಲ್ಲ. ಈಗಾಗಲೇ ರಾಜ್ಯ ಸರಕಾರಕ್ಕೆ ಈ ಬಗ್ಗೆ ಮನವಿ ಸಲ್ಲಿಸಿದ್ದು ಶೀಘ್ರದಲ್ಲಿಯೇ ನಾಡ ದೋಣಿ ಮೀನುಗಾರಿಕೆಗೆ ಸೀಮೆ ಎಣ್ಣೆಯನ್ನು ಮೀನುಗಾರಿಕೆ ಇಲಾಖೆಯ ಮೂಲಕ ವಿತರಿಸುವ ಬಗ್ಗೆ ಸರಕಾರ ಕ್ರಮ ಕೈಗೊಳ್ಳಲಿದೆ.
ನಾಡ ದೋಣಿ ಮೀನುಗಾರರ ಸೀಮೆ ಎಣ್ಣೆ ಸಮರ್ಪಕ ವಿತರಣೆಗೆ ವಿಶೇಷ ಮುತುವರ್ಜಿ ವಹಿಸಿದ ಮುಖ್ಯ ಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ, ಮೀನುಗಾರಿಕೆ ಸಚಿವರಾದ ಶ್ರೀ ಎಸ್. ಅಂಗಾರ, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್, ಸಂಸದರಾದ ಶ್ರೀ ಬಿ ವೈ ರಾಘವೇಂದ್ರ, ಕರಾವಳಿ ಜಿಲ್ಲೆಯ ಎಲ್ಲಾ ಶಾಸಕರಿಗೆ ನಾಡ ದೋಣಿ ಮೀನುಗಾರರ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago