Featured

ನಾಡದೋಣಿ ಮೀನುಗಾರಿಕೆ ಸೀಮೆ ಎಣ್ಣೆ ಸಮರ್ಪಕ ವಿತರಣೆಗೆ ಕ್ರಮ : ಯಶ್ ಪಾಲ್ ಸುವರ್ಣ -Vishwanews24

ನಾಡದೋಣಿ ಮೀನುಗಾರಿಕೆ ಸೀಮೆ ಎಣ್ಣೆ ಸಮರ್ಪಕ ವಿತರಣೆಗೆ ಕ್ರಮ : ಯಶ್ ಪಾಲ್ ಸುವರ್ಣ

ನಾಡ ದೋಣಿ ಮೀನುಗಾರಿಕೆ ಬಳಕೆಯ ಸೀಮೆ ಎಣ್ಣೆ ಅಸಮರ್ಪಕ ವಿತರಣೆಯಿಂದ ನಾಡ ದೋಣಿ ಮೀನುಗಾರರು ಎದುರಿಸುತ್ತಿರುವ ಸಮಸ್ಯೆಗೆ ಪರಿಹಾರ ಕಲ್ಪಿಸಿ ನಿರಂತರ ಸೀಮೆ ಎಣ್ಣೆ ಪೂರೈಕೆಗೆ ಸರಕಾರ ಕ್ರಮ ಕೈಗೊಂಡಿರುವುದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರಕಾರ ನಾಡದೋಣಿ ಮೀನುಗಾರಿಕೆ ಸೀಮೆ ಎಣ್ಣೆ ವಿತರಣೆಗೆ ಅನುದಾನ ಮಂಜೂರು ಮಾಡಿದೆ. ಇಂಧನ ಕಂಪೆನಿಗಳಲ್ಲಿ ನಿಗದಿತ ಪ್ರಮಾಣದಲ್ಲಿ
ಸೀಮೆ ಎಣ್ಣೆ ದಾಸ್ತಾನು ಕೊರತೆ ಉಂಟಾದ ಪರಿಣಾಮ ಸೀಮೆ ಎಣ್ಣೆ ವಿತರಣೆಯಲ್ಲಿ ವ್ಯತ್ಯಾಸ ಉಂಟಾಗಿದೆ.
ನಾಡ ದೋಣಿ ಮೀನುಗಾರರ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಸರಕಾರ ಶನಿವಾರದಿಂದಲೇ ಕೈಗಾರಿಕಾ ಬಳಕೆಯ ಸೀಮೆ ಎಣ್ಣೆಯನ್ನು ಅವಶ್ಯಕತೆ ಇದ್ದಲ್ಲಿ ನಾಡ ದೋಣಿ ಮೀನುಗಾರರಿಗೆ ಮೀಸಲಿರಿಸುವ ಬಗ್ಗೆ ಪ್ರಕ್ರಿಯೆಗೆ ಮುಂದಾಗಿದೆ.
ಈಗಾಗಲೇ ಮೀನುಗಾರಿಕೆ ಬಳಕೆಯ ಸೀಮೆ ಎಣ್ಣೆ ಆಹಾರ ಸರಬರಾಜು ಇಲಾಖೆಯ ಮೂಲಕ ವಿತರಣೆಯಾಗುತ್ತಿದ್ದು ಕೆಲವು ತಾಂತ್ರಿಕ ಸಮಸ್ಯೆಗಳಿಂದ ಸಮರ್ಪಕ ರೀತಿಯಲ್ಲಿ ವಿತರಣೆ ನಡೆಯುತ್ತಿಲ್ಲ. ಈಗಾಗಲೇ ರಾಜ್ಯ ಸರಕಾರಕ್ಕೆ ಈ ಬಗ್ಗೆ ಮನವಿ ಸಲ್ಲಿಸಿದ್ದು ಶೀಘ್ರದಲ್ಲಿಯೇ ನಾಡ ದೋಣಿ ಮೀನುಗಾರಿಕೆಗೆ ಸೀಮೆ ಎಣ್ಣೆಯನ್ನು ಮೀನುಗಾರಿಕೆ ಇಲಾಖೆಯ ಮೂಲಕ ವಿತರಿಸುವ ಬಗ್ಗೆ ಸರಕಾರ ಕ್ರಮ ಕೈಗೊಳ್ಳಲಿದೆ.
ನಾಡ ದೋಣಿ ಮೀನುಗಾರರ ಸೀಮೆ ಎಣ್ಣೆ ಸಮರ್ಪಕ ವಿತರಣೆಗೆ ವಿಶೇಷ ಮುತುವರ್ಜಿ ವಹಿಸಿದ ಮುಖ್ಯ ಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ, ಮೀನುಗಾರಿಕೆ ಸಚಿವರಾದ ಶ್ರೀ ಎಸ್. ಅಂಗಾರ, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್, ಸಂಸದರಾದ ಶ್ರೀ ಬಿ ವೈ ರಾಘವೇಂದ್ರ, ಕರಾವಳಿ ಜಿಲ್ಲೆಯ ಎಲ್ಲಾ ಶಾಸಕರಿಗೆ ನಾಡ ದೋಣಿ ಮೀನುಗಾರರ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

2 minutes ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

16 minutes ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

22 minutes ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

29 minutes ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago