Featured

ನಾಡಹಬ್ಬದಂತೆ ಕಂಗೊಳಿಸುತ್ತಿರುವ ಉಚ್ಚಿಲ ದಸರಾ ; ಶ್ರೀ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿದ ಭಾರೀ ಸ್ಪಂದನೆ – vishwanews24

ನಾಡಹಬ್ಬದಂತೆ ಕಂಗೊಳಿಸುತ್ತಿರುವ ಉಚ್ಚಿಲ ದಸರಾ ; ಶ್ರೀ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿದ ಭಾರೀ ಸ್ಪಂದನೆ

ಕಾಪು: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಜರಗುತ್ತಿರುವ ಮೂರನೇ ವರ್ಷದ ಉಡುಪಿ ಉಚ್ಚಿಲ ದಸರಾ 2024 ವೈಭವವನ್ನು ಕಣ್ತುಂಬಿಸಿಕೊಳ್ಳಲು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸಹಿತ ರಾಜ್ಯ ಹಾಗೂ ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ ಉಚ್ಚಿಲಕ್ಕೆ ಧಾವಿಸುತ್ತಿದ್ದಾರೆ.

ಭಾರೀ ಜನಸಾಗರವೇ ಉಚ್ಚಿಲದತ್ತ ಹರಿದು ಬಂದಿದ್ದು ಈವರೆಗೆ ಎರಡೂವರೆ ಲಕ್ಷಕ್ಕೂ ಮಿಕ್ಕಿದ ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ತಾಯಿ ಮಹಾಲಕ್ಷ್ಮೀ ಸಹಿತ ಪರಿವಾರ ದೇವರು, ಶಾರದಾ ಮಾತೆ ಮತ್ತು ನವದುರ್ಗೆಯರ ದರ್ಶನ ಪಡೆದರು.

ದೇಗುಲ ಮತ್ತು ಶಾರದಾ ಮಂಟಪಕ್ಕೆ ಪ್ರವೇಶಿಸಲು ಸರತಿ ಸಾಲಿನ ವ್ಯವಸ್ಥೆ ಮಾಡಲಾಗಿದ್ದು ಒಳ ಪ್ರಾಂಗಣದಲ್ಲೂ ಸರತಿ ಸಾಲಿನಲ್ಲಿ ದೇವರ ದರ್ಶನ ಪಡೆಯಲು ಅವಕಾಶ ಕಲ್ಪಿಸಿಕೊಡಲಾಗಿದೆ. ಭಕ್ತರು ವಸ್ತು ಪ್ರದರ್ಶನ, ಅಮ್ಯೂಸ್‌ಮೆಂಟ್‌, ಆಹಾರ ಮಳಿಗೆಗಳಿಗೂ ಭೇಟಿ ನೀಡಿ ಸಂಭ್ರಮಿಸುತ್ತಿದ್ದಾರೆ.

ಭೋಜನ -ಉಪಾಹಾರ

ಮೊದಲ ಆರು ದಿನಗಳಲ್ಲಿ 75 ಸಾವಿರಕ್ಕೂ ಅಧಿಕ ಮಂದಿ ಭೋಜನ ಪ್ರಸಾದ ಸ್ವೀಕರಿಸಿದ್ದು, ಸುಮಾರು 1 ಲಕ್ಷಕ್ಕೂ ಅಧಿಕ ಮಂದಿ ಸಂಜೆಯ ಉಪಾಹಾರವನ್ನು ಸೇವಿಸಿದ್ದಾರೆ. ಭಕ್ತರ ಅನುಕೂಲಕ್ಕಾಗಿ ಬಫೆ ಮತ್ತು ಎಲೆಯೂಟಕ್ಕೆ ಆದ್ಯತೆ ನೀಡಲಾಗಿದೆ

ಸ್ವಯಂ ಸೇವಕರಿಂದ ಸೇವೆ

ಭಕ್ತರ ಅನುಕೂಲಕ್ಕಾಗಿ, ವಿವಿಧ ವ್ಯವಸ್ಥೆಗಳ ಜೋಡಣೆಗಾಗಿ ಉಪ್ಪಳದಿಂದ ಶೀರೂರುವರೆಗಿನ ಮೊಗವೀರ ಸಮಾಜದ ಸಂಘ ಸಂಸ್ಥೆಗಳು, ಇತರ ಸಮಾಜಗಳ ಸಂಘ ಸಂಸ್ಥೆಗಳು, ಮೊಗವೀರ ಯುವ ಸಂಘಟನೆ ಸಹಿತವಾಗಿ ವಿವಿಧ ಸಂಘ ಸಂಸ್ಥೆಗಳ ಸುಮಾರು ಮೂರು ಸಾವಿರಕ್ಕೂ ಅಧಿಕ ಮಂದಿ ಸ್ವಯಂ ಸೇವಕರು ವಿವಿಧ ಪಾಳಿಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದಲ್ಲದೇ ರೇಂಜರ್ ಮತ್ತು ರೋವರ್, ಎನ್ನೆಸ್ಸೆಸ್‌ ಮತ್ತು ಸ್ಕೌಟ್‌ – ಗೈಡ್ಸ್‌ ವಿದ್ಯಾರ್ಥಿಗಳು ವಿವಿಧೆಡೆ ಸ್ವಯಂ ಸೇವಕರಾಗಿ ಸೇವಾ ನಿರತರಾಗಿದ್ದಾರೆ.

ನಿರೀಕ್ಷೆಗೂ ಮೀರಿದ ಸ್ಪಂದನೆ

ಉಚ್ಚಿಲ ದಸರಾ ವೈಭವದಲ್ಲಿ ಪಾಲ್ಗೊಳ್ಳುತ್ತಿರುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮಧ್ಯಾಹ್ನ ಮತ್ತು ರಾತ್ರಿ ಅನ್ನಸಂತರ್ಪಣೆ, ಸಂಜೆ ಉಪಾಹಾರ ವಿತರಣೆಗೂ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಕ್ಷೇತ್ರಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ವಿವಿಧ ಸೌಕರ್ಯ, ಸೌಲಭ್ಯಗಳನ್ನು ಜೋಡಿಸಲಾಗಿದ್ದು ಯಾವುದೇ ರೀತಿಯಲ್ಲೂ ಕುಂದಾಗದಂತೆ ದ. ಕ. ಮೊಗವೀರ ಮಹಾಜನ ಸಂಘ, ಕ್ಷೇತ್ರಾಡಳಿತ ಸಮಿತಿ, ಸ್ವಯಂ ಸೇವಕರ ತಂಡ ಉತ್ಸಾಹದಿಂದ ಕೆಲಸ ಮಾಡುತ್ತಿದೆ ಎಂದು ಉಚ್ಚಿಲ ದಸರಾ ರೂವಾರಿ ಡಾ| ಜಿ. ಶಂಕರ್‌ ತಿಳಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago