Featured

ನಾಡಹಬ್ಬದಂತೆ ಕಂಗೊಳಿಸುತ್ತಿರುವ ಉಚ್ಚಿಲ ದಸರಾ ; ಶ್ರೀ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿದ ಭಾರೀ ಸ್ಪಂದನೆ – vishwanews24

ನಾಡಹಬ್ಬದಂತೆ ಕಂಗೊಳಿಸುತ್ತಿರುವ ಉಚ್ಚಿಲ ದಸರಾ ; ಶ್ರೀ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿದ ಭಾರೀ ಸ್ಪಂದನೆ

ಕಾಪು: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಜರಗುತ್ತಿರುವ ಮೂರನೇ ವರ್ಷದ ಉಡುಪಿ ಉಚ್ಚಿಲ ದಸರಾ 2024 ವೈಭವವನ್ನು ಕಣ್ತುಂಬಿಸಿಕೊಳ್ಳಲು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸಹಿತ ರಾಜ್ಯ ಹಾಗೂ ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ ಉಚ್ಚಿಲಕ್ಕೆ ಧಾವಿಸುತ್ತಿದ್ದಾರೆ.

ಭಾರೀ ಜನಸಾಗರವೇ ಉಚ್ಚಿಲದತ್ತ ಹರಿದು ಬಂದಿದ್ದು ಈವರೆಗೆ ಎರಡೂವರೆ ಲಕ್ಷಕ್ಕೂ ಮಿಕ್ಕಿದ ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ತಾಯಿ ಮಹಾಲಕ್ಷ್ಮೀ ಸಹಿತ ಪರಿವಾರ ದೇವರು, ಶಾರದಾ ಮಾತೆ ಮತ್ತು ನವದುರ್ಗೆಯರ ದರ್ಶನ ಪಡೆದರು.

ದೇಗುಲ ಮತ್ತು ಶಾರದಾ ಮಂಟಪಕ್ಕೆ ಪ್ರವೇಶಿಸಲು ಸರತಿ ಸಾಲಿನ ವ್ಯವಸ್ಥೆ ಮಾಡಲಾಗಿದ್ದು ಒಳ ಪ್ರಾಂಗಣದಲ್ಲೂ ಸರತಿ ಸಾಲಿನಲ್ಲಿ ದೇವರ ದರ್ಶನ ಪಡೆಯಲು ಅವಕಾಶ ಕಲ್ಪಿಸಿಕೊಡಲಾಗಿದೆ. ಭಕ್ತರು ವಸ್ತು ಪ್ರದರ್ಶನ, ಅಮ್ಯೂಸ್‌ಮೆಂಟ್‌, ಆಹಾರ ಮಳಿಗೆಗಳಿಗೂ ಭೇಟಿ ನೀಡಿ ಸಂಭ್ರಮಿಸುತ್ತಿದ್ದಾರೆ.

ಭೋಜನ -ಉಪಾಹಾರ

ಮೊದಲ ಆರು ದಿನಗಳಲ್ಲಿ 75 ಸಾವಿರಕ್ಕೂ ಅಧಿಕ ಮಂದಿ ಭೋಜನ ಪ್ರಸಾದ ಸ್ವೀಕರಿಸಿದ್ದು, ಸುಮಾರು 1 ಲಕ್ಷಕ್ಕೂ ಅಧಿಕ ಮಂದಿ ಸಂಜೆಯ ಉಪಾಹಾರವನ್ನು ಸೇವಿಸಿದ್ದಾರೆ. ಭಕ್ತರ ಅನುಕೂಲಕ್ಕಾಗಿ ಬಫೆ ಮತ್ತು ಎಲೆಯೂಟಕ್ಕೆ ಆದ್ಯತೆ ನೀಡಲಾಗಿದೆ

ಸ್ವಯಂ ಸೇವಕರಿಂದ ಸೇವೆ

ಭಕ್ತರ ಅನುಕೂಲಕ್ಕಾಗಿ, ವಿವಿಧ ವ್ಯವಸ್ಥೆಗಳ ಜೋಡಣೆಗಾಗಿ ಉಪ್ಪಳದಿಂದ ಶೀರೂರುವರೆಗಿನ ಮೊಗವೀರ ಸಮಾಜದ ಸಂಘ ಸಂಸ್ಥೆಗಳು, ಇತರ ಸಮಾಜಗಳ ಸಂಘ ಸಂಸ್ಥೆಗಳು, ಮೊಗವೀರ ಯುವ ಸಂಘಟನೆ ಸಹಿತವಾಗಿ ವಿವಿಧ ಸಂಘ ಸಂಸ್ಥೆಗಳ ಸುಮಾರು ಮೂರು ಸಾವಿರಕ್ಕೂ ಅಧಿಕ ಮಂದಿ ಸ್ವಯಂ ಸೇವಕರು ವಿವಿಧ ಪಾಳಿಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದಲ್ಲದೇ ರೇಂಜರ್ ಮತ್ತು ರೋವರ್, ಎನ್ನೆಸ್ಸೆಸ್‌ ಮತ್ತು ಸ್ಕೌಟ್‌ – ಗೈಡ್ಸ್‌ ವಿದ್ಯಾರ್ಥಿಗಳು ವಿವಿಧೆಡೆ ಸ್ವಯಂ ಸೇವಕರಾಗಿ ಸೇವಾ ನಿರತರಾಗಿದ್ದಾರೆ.

ನಿರೀಕ್ಷೆಗೂ ಮೀರಿದ ಸ್ಪಂದನೆ

ಉಚ್ಚಿಲ ದಸರಾ ವೈಭವದಲ್ಲಿ ಪಾಲ್ಗೊಳ್ಳುತ್ತಿರುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮಧ್ಯಾಹ್ನ ಮತ್ತು ರಾತ್ರಿ ಅನ್ನಸಂತರ್ಪಣೆ, ಸಂಜೆ ಉಪಾಹಾರ ವಿತರಣೆಗೂ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಕ್ಷೇತ್ರಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ವಿವಿಧ ಸೌಕರ್ಯ, ಸೌಲಭ್ಯಗಳನ್ನು ಜೋಡಿಸಲಾಗಿದ್ದು ಯಾವುದೇ ರೀತಿಯಲ್ಲೂ ಕುಂದಾಗದಂತೆ ದ. ಕ. ಮೊಗವೀರ ಮಹಾಜನ ಸಂಘ, ಕ್ಷೇತ್ರಾಡಳಿತ ಸಮಿತಿ, ಸ್ವಯಂ ಸೇವಕರ ತಂಡ ಉತ್ಸಾಹದಿಂದ ಕೆಲಸ ಮಾಡುತ್ತಿದೆ ಎಂದು ಉಚ್ಚಿಲ ದಸರಾ ರೂವಾರಿ ಡಾ| ಜಿ. ಶಂಕರ್‌ ತಿಳಿಸಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

4 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

4 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

4 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

7 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

7 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

7 hours ago