ನವದೆಹಲಿ: ಭಾರತದಲ್ಲಿ ಯುಗಾದಿ ಎಂದರೆ ಹೊಸ ಯುಗದ ಆರಂಭ ಎಂದರ್ಥ. ಇಂದು ಭಾರತದೆಲ್ಲೆಡೆ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮನೆ-ಮನಗಳಲ್ಲಿ ಸಂಭ್ರಮವೋ ಸಂಭ್ರಮ. ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿಯವರು ನಾಡಿನ ಜನತೆಗೆ ಕನ್ನಡದಲ್ಲೇ ಟ್ವೀಟ್ ಮಾಡಿ ಯುಗಾದಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.
ಎಲ್ಲರಿಗೂ ಸಂತಸದ ಯುಗಾದಿಯ ಶುಭಾಶಯಗಳು. ಭರವಸೆ ಮತ್ತು ಹೊಸ ಆರಂಭಗಳನ್ನು ಒಳಗೊಂಡ ಈ ಹಬ್ಬವು, ಮುಂಬರುವ ವರ್ಷದಲ್ಲಿ ಪ್ರತಿಯೊಬ್ಬರ ಜೀವನದಲ್ಲಿ ಅಪಾರ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ತರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಬರೆದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ದೇಶದೆಲ್ಲೆಡೆ ಯುಗಾದಿ ಹಬ್ಬವನ್ನು ಬೇರೆ ಬೇರೆ ಹೆಸರಿನಿಂದ ಆಚರಿಸಲಾಗುತ್ತದೆ. ಆಂಧ್ರಪ್ರದೇಶ (Andhra Pradesh) ಮತ್ತು ಕರ್ನಾಟಕದ (Karnataka) ಜನರು ಯುಗಾದಿಯನ್ನು ಹೊಸ ವರ್ಷವೆಂದು ಪರಿಗಣಿಸುತ್ತಾರೆ. ಈ ದಿನ ಬೇವು-ಬೆಲ್ಲವನ್ನು ಎಲ್ಲರಿಗೂ ಹಂಚಲಾಗುತ್ತದೆ. ಇದು ಜೀವನದಲ್ಲಿ ಒಳ್ಳೆಯದು ಮತ್ತು ಕೆಟ್ಟ ಹಂತವನ್ನು ಸಮಾನವಾಗಿ ಸ್ವೀಕರಿಸಬೇಕು ಎಂಬ ಸಂದೇಶವನ್ನು ಸಾರುತ್ತದೆ. ಅಲ್ಲದೇ ವಸಂತ ಋತುವನ್ನು ಸ್ವಾಗತಿಸುವ ದಿನವೂ ಇದಾಗಿದೆ.
ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಅನೇಕ ರಾಜಕೀಯ ನಾಯಕರು, ಸಿನಿ ತಾರೆಯರು ಜನತೆಗೆ ಯುಗಾದಿ ಹಬ್ಬದ ಶುಭಾಶಯ ತಿಳಿಸಿ ಸಂದೇಶ ಹಂಚಿಕೊಂಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…