ನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು ಎಂದು ಆಗ್ರಹಿಸಿದ ಸ್ಯಾಂಡಲ್ ವುಡ್ ನಟರು – Vishwanews24
ನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು ಎಂದು ಆಗ್ರಹಿಸಿದ ಸ್ಯಾಂಡಲ್ ವುಡ್ ನಟರು – Vishwanews24
ಬೆಂಗಳೂರು: ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶಿವಸೇನಾ ಕಾರ್ಯಕರ್ತರು ಕನ್ನಡ ಬಾವುಟವನ್ನು ಸುಟ್ಟು ಹಾಕಿರುವ ಘಟನೆಯನ್ನು ನಟರಾದ ಶಿವರಾಜ್ಕುಮಾರ್ ಹಾಗೂ ದರ್ಶನ್ ಅವರು ಖಂಡಿಸಿದ್ದು, ‘ನಮ್ಮ ಕರುನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು’ ಎಂದು ಆಗ್ರಹಿಸಿದ್ದಾರೆ.
‘ನಮ್ಮ ನಾಡ ಧ್ವಜ ಸುಟ್ಟವರಿಗೆ ತಕ್ಕ ಶಿಕ್ಷೆ ಆಗಲಿ. ನಿಜವಾದ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಿ. ಜೈ ಕನ್ನಡ. ಜೈ ಕರ್ನಾಟಕ’ ಎಂದು ಶಿವರಾಜ್ಕುಮಾರ್ ಟ್ವೀಟ್ನಲ್ಲಿ ಹೇಳಿದ್ದಾರೆ. ಜೊತೆಗೆ ವರನಟ ಡಾ.ರಾಜ್ಕುಮಾರ್ ಅವರು ಕನ್ನಡ ಪರ ಹೋರಾಟ ಮಾಡಿದ ಸಂದರ್ಭದ ಫೋಟೊವೊಂದನ್ನು ಶಿವರಾಜ್ಕುಮಾರ್ ಅಪ್ಲೋಡ್ ಮಾಡಿದ್ದಾರೆ.
ನಮ್ಮ ನಾಡ ಧ್ವಜ ಸುಟ್ಟವರಿಗೆ ತಕ್ಕ ಶಿಕ್ಷೆ ಆಗಲಿ. ನಿಜವಾದ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಿ. ಜೈ ಕನ್ನಡ. ಜೈ ಕರ್ನಾಟಕ.#ಕನ್ನಡಹೋರಾಟಗಾರರನ್ನಬಿಡುಗಡೆಗೊಳಿಸಿ#releasekannadaactivists@BSBommai @CMofKarnataka @JnanendraAraga @COPBELAGAVI pic.twitter.com/qcjOVdb4SS
— DrShivaRajkumar (@NimmaShivanna) December 15, 2021
‘ಕನ್ನಡ ಹೋರಾಟಗಾರರನ್ನ ಬಿಡುಗಡೆಗೊಳಿಸಿ’ ಎಂಬ ಹ್ಯಾಷ್ಟ್ಯಾಗ್ ಅಭಿಯಾನವನ್ನೂ ಶಿವರಾಜ್ಕುಮಾರ್ ಆರಂಭಿಸಿದ್ದಾರೆ.
ನಮ್ಮ ಕರುನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು. ನಿಜವಾಗಿ ಕನ್ನಡ ಪರ ಹೋರಾಟ ಮಾಡುವವರನ್ನು ಬಿಡುಗಡೆಗೊಳಿಸಿ. ಕನ್ನಡ ತಾಯಿ ತಾಯ್ನಾಡು ವಿಷಯಕ್ಕೆ ಈ ರೀತಿ ಅಪಮಾನ ಮಾಡಿರುವವರಿಗೆ ತಕ್ಕ ಪಾಠ ಕಲಿಸಲೇಬೇಕು. ದಯಮಾಡಿ ತಕ್ಕ ಕ್ರಮ ಕೈಗೊಳ್ಳಬೇಕಾಗಿ ವಿನಂತಿ @CMofKarnataka pic.twitter.com/n8ullGB1FK
— Darshan Thoogudeepa (@dasadarshan) December 15, 2021
ಕಾಪು ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ ಪೊಲೀಸರ ಮಧ್ಯಸ್ಥಿಕೆಯಲ್ಲಿ ಇತ್ಯರ್ಥ : vishwanews24


