ಮೈಸೂರು: ನಾಡ ಹಬ್ಬ ದಸರಾ ಆಚರಣೆಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟಿಸಲಾಗಿದೆ. ಕೋವಿಡ್ ಕಾರಣದಿಂದ ಈ ಬಾರಿಯೂ ಸರಳ ದಸರಾ ಆಚರಣೆ ನಡೆಯುತ್ತಿದ್ದು, ಮೈಸೂರು ಹೊರತುಪಡಿಸಿ ರಾಜ್ಯದ ಬೇರೆಡೆ ಕಾರ್ಯಕ್ರಮಗಳಲ್ಲಿ 400 ಕ್ಕಿಂತ ಹೆಚ್ಚು ಜನರು ಒಮ್ಮೆಗೆ ಸೇರುವಂತಿಲ್ಲ ಎಂದು ಸರ್ಕಾರ ಆದೇಶಿಸಿದೆ.
ಮೈಸೂರು ಪ್ರತ್ಯೇಕ ಮತ್ತು ಮೈಸೂರು ಹೊರತುಪಡಿಸಿ ರಾಜ್ಯದ ಇತರ ಭಾಗಗಳಿಗೆ ಅನ್ವಯವಾಗುವಂತೆ ಎರಡು ಮಾರ್ಗಸೂಚಿ ಪ್ರಕಟಿಸಲಾಗಿದೆ.
ಅರಮನೆ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಬಳಕೆ, ಸ್ಯಾನಿಟೈಸರ್ ಬಳಕೆ ಕಡ್ಡಾಯ
ಅ.7ರಂದು ಚಾಮುಂಡಿ ಬೆಟ್ಟದಲ್ಲಿ ನಡೆಯುವ ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ 100 ಜನರಿಗೆ ಮಾತ್ರ ಪ್ರವೇಶ. ಪ್ರತಿದಿನದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 500 ಜನರಿಗೆ ಮಾತ್ರ ಭಾಗವಹಿಸಲು ಅವಕಾಶ.
ಅ.15ರಂದು ನಡೆಯುವ ಜಂಬೂ ಸವಾರಿ/ ಪಂಜಿನ ಕವಾಯತಿಗೆ 500 ಜನರಿಗೆ ಮಾತ್ರ ಅವಕಾಶ.
ಆಚರಣೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಅಧಿಕಾರಿಗಳು, ಸಿಬ್ಬಂದಿ, ಕಲಾವಿದರು, ರಕ್ಷಣಾ ಸಿಬ್ಬಂದಿಗಳು ಅ.4ರ ನಂತರ ಮಾಡಿಸಿದಿ ಆರ್ ಟಿಪಿಸಿಆರ್ ವರದಿ ಮತ್ತು ಕನಿಷ್ಠ ಒಂದು ಡೋಸ್ ಲಸಿಕೆ ಪಡೆದಿರುವುದನ್ನು ಕಡ್ಡಾಯಗೊಳಿಸಬೇಕು.
ಇತರೆಡೆ:
ರಾಜ್ಯದ ಇತರೆಡೆ ಆಚರಣೆಯ ಸಂದರ್ಭದಲ್ಲಿ 400ಕ್ಕಿಂತ ಜನರು ಒಮ್ಮೆಲೆ ಸೇರುವಂತಿಲ್ಲ. ಸಾಮಾಜಿಕ ಅಂತರ ಕಡ್ಡಾಯ ಪಾಲಿಸಬೇಕು.
ಕೋವಿಡ್ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
ಕೋಟ : ಈ ಬಾರಿಯ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಗೆ ರವಿ ಕಟಪಾಡಿ ಆಯ್ಕೆ -Vishwanews24
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…