ಮಂಗಳೂರು : ಮಹಾತ್ಮಾಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಜನ್ಮದಿನವನ್ನು ಮಂಗಳೂರಿನಲ್ಲಿ ಆಚರಿಸಲಾಗಿದೆ.
ಮೇ 19 ನಾಥೂರಾಮ್ ಗೋಡ್ಸೆ ಜನ್ಮದಿನವಾಗಿದ್ದು, ದೇಶಭಕ್ತನ ಹೆಸರಿನಲ್ಲಿ ಮಹಾತ್ಮಗಾಂಧಿ ಹಂತಕ ನಾಥೂರಾಮ್ ವಿನಾಯಕ ಗೋಡ್ಸೆ ಅವರ ಜನ್ಮದಿನವನ್ನು ಮಂಗಳೂರಿನಲ್ಲಿ ಆಚರಿಸಲಾಗಿದೆ.
ಅಖಿಲ ಭಾರತ ಹಿಂದೂ ಮಹಾಸಭಾ ಕರ್ನಾಟಕ ರಾಜ್ಯ ಘಟಕದ ಅಶ್ರಯದಲ್ಲಿ ಇದನ್ನು ಆಚರಿಸುವ ಮೂಲಕ ವಿವಾದ ಸೃಷ್ಟಿಸಲಾಗಿದೆ.
ಅಹಿಂಸಾವಾದಿ, ರಾಷ್ಟ್ರಪಿತ ಎಂದು ಇಡೀ ದೇಶದ ಜನತೆ ಗೌರವಿಸುವ ಮಹಾತ್ಮಾಗಾಂಧಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯನ್ನು ಇದೀಗ ಕೆಲವು ಹಿಂದೂ ಸಂಘಟನೆಗಳು ವೈಭವೀಕರಿಸುತ್ತಿದ್ದು, ಆತನ ಜನ್ಮ ದಿನವನ್ನೂ ಆಚರಿಸುತ್ತಿದ್ದಾರೆ. ಮಂಗಳೂರಿನಲ್ಲೂ ನಾಥೂರಾಮ್ ಗೋಡ್ಸೆ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆತನನ್ನು ಮಹಾನ್ ದೇಶಭಕ್ತ ಎಂದು ಬಿಂಬಿಸಲಾಗಿದೆ. ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದೂ ಮಹಾಸಭಾದ ಕರ್ನಾಟಕ ರಾಜ್ಯ ಅಧ್ಯಕ್ಷ ಎಲ್ ಕೆ ಸುವರ್ಣ,ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಮೊದಲಾದವರಿದ್ದರು. ಮಂಗಳೂರಿನಲ್ಲಿ ನಡೆದ ಈ ಕಾರ್ಯಕ್ರಮದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಕಾರ್ಯಕ್ರಮ ಆಯೋಜಿಸಿದ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಗ್ರಹ ವ್ಯಕ್ತವಾಗಿದೆ.
ಉಳ್ಳಾಲದಲ್ಲಿನ ಹಿಂದೂ ಮಹಾಸಭಾದ ಸದಸ್ಯರೊಬ್ಬರ ಮನೆಯಲ್ಲಿ ನಾಥೂರಾಮ್ ಗೋಡ್ಸೆ ಅವರ ಭಾವಚಿತ್ರಕ್ಕೆ ಪುಷ್ಪಅರ್ಚನೆ ಗೆೃಯುವ ಮೂಲಕ ಆಚರಿಸಲಾಗಿದ್ದು.ಈ ಕಾರ್ಯಕ್ರಮದಲ್ಲಿ ಹಿಂದೂ ಮಹಾಸಭಾ ಕರ್ನಾಟಕ ರಾಜ್ಯ ಅಧ್ಯಕ್ಷ ಎಲ್.ಕೆ ಸುವಣ೯, ಹಿಂದೂ ಮಹಾಸಭಾ ಕರ್ನಾಟಕ ರಾಜ್ಯ ಪ್ರಭಾರಿ ರಾಜೇಶ್ ಪೂಜಾರಿ, ಹಿಂದೂ ಮಹಾಸಭಾ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಹಾಗೂ ಲೋಕೇಶ್ ಮತ್ತಿತ್ತರ ಕಾರ್ಯಕರ್ತರು ಭಾಗವಹಿಸಿದ್ದರು.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…