ನಾಥೂರಾಮ್ ಗೋಡ್ಸೆ ಹಾಗೂ ಮೋದಿ ಅವರದ್ದು ಒಂದೇ ಸಿದ್ಧಾಂತ : ರಾಹುಲ್ ಕಿಡಿ -Vishwanews24

ವಯನಾಡ್‌: ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹಂತಕ ನಾಥುರಾಮ್‌ ಗೋಡ್ಸೆ ಒಂದೇ ಸಿದ್ಧಾಂತವನ್ನು ನಂಬಿದವರು. ವ್ಯತ್ಯಾಸವೆಂದರೆ ತಾನು ಗೋಡ್ಸೆಯನ್ನು ನಂಬುತ್ತೇನೆ ಎಂದು ಹೇಳಲು ನರೇಂದ್ರ ಮೋದಿಗೆ ಧೈರ್ಯವಿಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕಿಡಿಕಾರಿದರು.

ಹುತಾತ್ಮರ ದಿನದಂದು ತಮ್ಮ ಲೋಕಸಭಾ ಕ್ಷೇತ್ರ ವಯನಾಡಿನ ಕಲ್ಪೆಟ್ಟದಲ್ಲಿ ‘ಸಂವಿಧಾನ ಉಳಿಸಿ’ ಜಾಥಾದಲ್ಲಿ ಪಾಲ್ಗೊಂಡ ನಂತರ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

“ನಾಥುರಾಮ್‌ ಗೋಡ್ಸೆ ಯಾರನ್ನೂ ಇಷ್ಟಪಡುತ್ತಿರಲಿಲ್ಲ, ಆತನಿಗೆ ಯಾರ ಬಗ್ಗೆಯೂ ಕಾಳಜಿ ಇರಲಿಲ್ಲ, ತನ್ನನ್ನೇ ತಾನು ನಂಬುತ್ತಿರಲಿಲ್ಲ. ಈ ಕಾರಣಕ್ಕೆ ಆತ ಮಹಾತ್ಮ ಗಾಂಧಿಯನ್ನು ಕೊಂದ. ಇದೇ ರೀತಿ ನಮ್ಮ ಪ್ರಧಾನಿ ಕೂಡ; ಅವರನ್ನು ಮಾತ್ರ ಪ್ರೀತಿಸುತ್ತಾರೆ, ಅವರನ್ನು ಮಾತ್ರ ನಂಬುತ್ತಾರೆ,” ಎಂದು ದೂರಿದರು.

“ನೀವು ಗಮನಿಸಿ, ನರೇಂದ್ರ ಮೋದಿಗೆ ನಿರುದ್ಯೋಗ ಮತ್ತು ಉದ್ಯೋಗದ ಬಗ್ಗೆ ಏನೇ ಪ್ರಶ್ನೆಗಳನ್ನು ಕೇಳಿ ಅವರು ತಕ್ಷಣ ನಿಮ್ಮ ಗಮನವನ್ನು ಬೇರೆಡೆ ಸೆಳೆಯುತ್ತಾರೆ. ಎನ್‌ಆರ್‌ಸಿ ಮತ್ತು ಸಿಎಎಯಿಂದ ಉದ್ಯೋಗ ಸಿಗುವುದಿಲ್ಲ. ಕಾಶ್ಮೀರದ ಪರಿಸ್ಥಿತಿ ಮತ್ತು ಹೊತ್ತಿ ಉರಿಯುತ್ತಿರುವ ಅಸ್ಸಾಂನಿಂದ ನಮ್ಮ ಯುವ ಜನರಿಗೆ ಉದ್ಯೋಗ ಸಿಗಲಾರದು,” ಎಂದು ಅವರು ವಿವಿರಿಸಿದರು.

ರಾಹುಲ್ ಗಾಂಧಿ ಅವರ ಸ್ವಕ್ಷೇತ್ರವೂ ಆಗಿರುವ ವಯನಾಡ್​ನಲ್ಲಿ ಆಯೋಜಿಸಲಾಗಿದ್ದ ರ‍್ಯಾಲಿಯಲ್ಲಿ ಕೇರಳ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮುಲ್ಲಪ್ಪಳ್ಳಿ ರಾಮಚಂದ್ರನ್, ಕೇರಳ ವಿಧಾನಸಭೆ ಪ್ರತಿಪಕ್ಷ ನಾಯಕ ರಮೇಶ್ ಚೆನ್ನಿಥಾಲಾ,  ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ – vishwanews24

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ…

17 hours ago

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ – ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ ; ಯುವಕ ವಶಕ್ಕೆ – vishwanews24

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ - ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ…

17 hours ago

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ – vishwanews24

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ ಮಂಗಳೂರು: ಮಂಗಳೂರು ನಗರ ಪೊಲೀಸ್…

17 hours ago

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ ಅಳವಡಿಕೆ – vishwanews24

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ…

18 hours ago

ಚಿಕನ್ ಪ್ರಿಯರಿಗೆ ಶಾಕ್ : ದಾಖಲೆಯ ಏರಿಕೆ ಕಂಡ ಚಿಕನ್, ಮೊಟ್ಟೆ ದರ – vishwanews24

ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಶಾಕ್: ದಾಖಲೆ ಬರೆದ ದರ ಬೆಂಗಳೂರು: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ…

18 hours ago

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ – vishwanews24

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ ಮಂಗಳೂರು:  ಸರ್ಕಾರಿ ಕಾಲೇಜಿನ ಬಿಬಿಎ…

18 hours ago