ಮಂಗಳೂರು: ‘ಇನ್ನು ಮುಂದೆ ಚುನಾವಣೆಗಳಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆ ಸ್ಥಾನವನ್ನು ಯುವಕರಿಗೆ ಬಿಟ್ಟುಕೊಟ್ಟು ಅವರನ್ನು ಗೆಲ್ಲಿಸಲು ಶ್ರಮಿಸುತ್ತೇನೆ’ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಪ್ರಕಟಿಸಿದ್ದಾರೆ.
ಕಳೆದ ಚುನಾವಣೆಗೂ ಮೊದಲೇ ಆಗಿನ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಮಿಥುನ್ ರೈ ಅವರಿಗೆ ಅವಕಾಶ ಕೊಡಿ ಎಂದು ವರಿಷ್ಠರಿಗೆ ಹೇಳಿದ್ದೆ. ಚುನಾವಣೆಯಲ್ಲಿ ಹೀನಾಯವಾಗಿ ಸೋತೆ. ಪ್ರಾಮಾಣಿಕತೆ ನನ್ನನ್ನು ಗೆಲ್ಲಿಸಲಿಲ್ಲ. ಇನ್ಮುಂದೆ ಯುವಕರನ್ನು ನಿಲ್ಲಿಸಿ ಗೆಲ್ಲಿಸಲು ಪಣ ತೊಡುತ್ತೇನೆ ಎಂದು ಜೈನ್ ಹೇಳಿದರು.
ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಅಗಲಿದ ಒಲಿಂಪಿಕ್ಸ್ ಪದಕ ವಿಜೇತ, ಪದ್ಮಶ್ರೀ ಮಿಲ್ಖಾ ಸಿಂಗ್ ಭಾವಚಿತ್ರಕ್ಕೆ ಗೌರವ ಸಲ್ಲಿಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ದೇಶ ಉಳಿಯಬೇಕಾದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ‘ಕಾಂಗ್ರೆಸ್ ಉಳಿಯಬೇಕಾದರೆ ಯುವಕರಿಗೆ ಹೆಚ್ಚು ಅವಕಾಶ ನೀಡಬೇಕು. ಯುವಕರಿಗೆ ಅವಕಾಶ ನೀಡಿದರೆ ಮತದಾರರಿಗೂ ಸ್ಫೂರ್ತಿ ಬರುತ್ತದೆ. ರಾಜಕಾರಣದಲ್ಲಿ ಈ ಬದಲಾವಣೆಯ ಅಗತ್ಯವಿದೆ. ಎಲ್ಲ ಹಿರಿಯರಿಗೆ ಇದೇ ಕಿವಿಮಾತು ಹೇಳುತ್ತಿದ್ದೇನೆ’ ಎಂದರು.
ಯುವ ಮುಖಂಡ ಮಿಥುನ್ ರೈ ಮಾತನಾಡಿ, ‘ದೇಶಕ್ಕೆ ಗೌರವ ತಂದುಕೊಟ್ಟವರನ್ನು ಸ್ಮರಿಸುವ ಕಾರ್ಯವನ್ನು ಕಾಂಗ್ರೆಸ್ ಮಾಡುತ್ತದೆ’ ಎಂದರು.
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…