ಬೆಂಗಳೂರು: 17 ಅತೃಪ್ತ ಶಾಸಕರು ರಾಜೀನಾಮೆ ನೀಡಿದ ಬಳಿಕ ಸಿಎಂ ಕುಮಾರಸ್ವಾಮಿ ರಾಜೀನಾಮೆ ಕೊಡಲಿ ಎಂದು ಬಿಜೆಪಿ ನಾಯಕರು ಆಗ್ರಹ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಅಧಿಕಾರ ಬಿಡಲು ಒಪ್ಪದ ಸಿಎಂ ಎಚ್ಡಿಕೆ ನಾನ್ಯಾಕೆ ರಾಜೀನಾಮೆ ಕೊಡಲಿ ಎಂದು ಬಿಎಸ್ವೈಗೆ ತಿರುಗೇಟು ನೀಡಿದ್ದಾರೆ.
ಮೈತ್ರಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2009-10ರಲ್ಲಿ ಇದೇ ಯಡಿಯೂರಪ್ಪ ಸಿಎಂ ಆಗಿದ್ದಾಗ 8 ಸಚಿವರು ಸೇರಿದಂತೆ 18 ಶಾಸಕರು ರಾಜೀನಾಮೆ ನೀಡಿದ್ದರು. ಆಗ ಏನಾಯ್ತು? ಈಗ ನಾನ್ಯಾಕೆ ರಾಜೀನಾಮೆ ನೀಡಲಿ? ನಾನು ರಾಜೀನಾಮೆ ಕೊಡುವ ಅಗತ್ಯವೇ ಇಲ್ಲ. ನಾನಿನ್ನೂ ರಾಜೀನಾಮೆ ಕೊಡುವ ಸನ್ನಿವೇಶ ಬಂದಿಲ್ಲ ಎಂದು ಹೇಳಿದರು.
ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ಕೊಡುವ ಅಗತ್ಯವಿಲ್ಲ. 2008, 2009 ರಲ್ಲಿ ಯಡಿಯೂರಪ್ಪ ರಾಜಿನಾಮೆ ಕೊಟ್ಟಿದ್ರಾ? ಇದನ್ನು ಬಿಜೆಪಿಯವರು ನೆನಪಿಸಿಕೊಳ್ಳುವಂತೆ ಬಿಜೆಪಿಗೆ ತಿರುಗೇಟು ನೀಡಿದರು. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ 2008,09 ರಲ್ಲಿ ಸಚಿವರಾಗಿದ್ದ 18 ಮಂದಿ ರಾಜೀನಾಮೆ ಕೊಟ್ಟಿದ್ದರು. ಆಗ ಯಡಿಯೂರಪ್ಪ ಅವರು ರಾಜಿನಾಮೆ ಕೊಟ್ಟಿದ್ರಾ ಎಂದು ಪ್ರಶ್ನಿಸಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…