Featured

ನಾನೀಗ ರಾಜಕೀಯದ ಕೊನೆಗಾಲದಲ್ಲಿದ್ದೇನೆ : ಸಿಎಂ ಸಿದ್ದರಾಮಯ್ಯ – vishwanews24

ರಾಜಕೀಯದಲ್ಲಿ ಜನರ ಪ್ರೀತಿ, ಅಭಿಮಾನ ಗಳಿಸದಿದ್ದರೆ ಉಳಿಗಾಲವಿಲ್ಲ : ಸಿಎಂ ಸಿದ್ದರಾಮಯ್ಯ

ಚಾಮರಾಜನಗರ : ನಾನೀಗ ರಾಜಕೀಯದ ಕೊನೆಗಾಲದಲ್ಲಿದ್ದೇನೆ. ಜನರ ಪ್ರೀತಿ, ಅಭಿಮಾನ ಗಳಿಸದಿದ್ದರೆ ರಾಜಕೀಯದಲ್ಲಿ ಉಳಿಗಾಲವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದಲ್ಲಿ ಸರ್ಕಾರಿ ಶಾಲಾ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಚಾಮರಾಜನಗರಕ್ಕೆ ಹೋದರೆ ಅಧಿಕಾರ ಕಳೆದುಕೊಳ್ಳುತ್ತೀರಿ ಎಂದಿದ್ದರು. ಜೆ.ಹೆಚ್.ಪಟೇಲರಿಗೆ ಆಗಿನ ಕೆಲ ಶಾಸಕರು ಹೇಳಿದ್ದರು. ಪಾಪ ಆಗಿನಿಂದ ಆ ಕಳಂಕ ಚಾಮರಾಜನಗರ ಮೇಲಿದೆ. ನಾನು ೨ನೇ ಬಾರಿ ಮುಖ್ಯಮಂತ್ರಿಯಾಗಿ ಚಾಮರಾಜನಗರಕ್ಕೆ ಬಂದಿದ್ದೇನೆ. ಈ ಮೂಢನಂಬಿಕೆಯನ್ನು ಅವರು ನಂಬಿರಲಿಲ್ಲ, ನಾನೂ ನಂಬಲಿಲ್ಲ ಎಂದು ತಿಳಿಸಿದರು.

ಚಾಮರಾಜನಗರಕ್ಕೆ ಬಂದು ಹೊಸ ಜಿಲ್ಲೆ ಘೋಷಣೆ ಮಾಡಿದ್ದೆವು. ಆಗ ನಾನು ಉಪ ಮುಖ್ಯಮಂತ್ರಿಯಾಗಿದ್ದೆ. ನಾವು ಚಾಮರಾಜನಗರಕ್ಕೆ ಬಂದು ಜಿಲ್ಲೆಯನ್ನು ಘೋಷಣೆ ಮಾಡಿದ್ದು. ನಾನು ಏನಿಲ್ಲ ಅಂದರೂ 20 ಬಾರಿ ಚಾಮರಾಜನಗರಕ್ಕೆ ಬಂದಿದ್ದೇನೆ. ನಾನು ಚಾಮರಾಜನಗರಕ್ಕೆ ಬಂದಾಗಲೆಲ್ಲ ಅಧಿಕಾರ ಕಳೆದುಕೊಳ್ಳುವ ಬದಲು ಸಿಎಂ ಕುರ್ಚಿ ಗಟ್ಟಿಯಾಗಿದೆ ಎಂದು ಹೇಳಿದರು.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

16 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

17 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

17 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

17 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

17 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

18 hours ago