ಬೆಂಗಳೂರು: ಯಾವುದೇ ಟೀಕೆಗಳು ಬಂದರೂ ಅದಕ್ಕೆಲ್ಲ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಮತ್ತು ಅಭಿವೃದ್ಧಿ ಹೆಸರಲ್ಲಿ ಭ್ರಷ್ಟಾಚಾರ ಸಹಿಸಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಕುಮಾರಸ್ವಾಮಿ ಟ್ವೀಟ್ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ನಾನು ನನ್ನ ಕೆಲಸ ಮಾಡುತ್ತಿದ್ದೇನೆ. ಟೀಕೆಗಳು ಬರುತ್ತವೆ. ಅದಕ್ಕೆಲ್ಲ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಹೇಳಿಕೆಗಳಿಗೆಲ್ಲ ಪ್ರತಿಕ್ರಿಯೆ ಕೊಡಬಾರದೆಂದು ನಿರ್ಧಾರ ಮಾಡಿದ್ದೇನೆ ಎಂದು ಹೇಳಿದ್ದಾರೆ.
ಅಭಿವೃದ್ಧಿ ಹೆಸರಲ್ಲಿ ಭ್ರಷ್ಟಾಚಾರ ಸಹಿಸಲ್ಲ. ಇದರ ನಿರ್ಮೂಲನೆಗೆ ಸಾರ್ವಜನಿಕರ ಸಹಕಾರ ಬೇಕು. ಸಾರ್ವಜನಿಕರು ನನ್ನ ಗಮನಕ್ಕೆ ತಂದರೆ ಮುಲಾಜಿಲ್ಲದೇ ಭ್ರಷ್ಟಾಚಾರದ ವಿರುದ್ದ ಕ್ರಮ ಕೈಗೊಳ್ಳುವೆ ಎಂದು ಹೇಳಿದರು.
ಬೆಂಗಳೂರು ಅಭಿವೃದ್ಧಿಗೆ ನಮ್ಮ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಅಭಿವೃದ್ಧಿ ವಿಚಾರವಾಗಿ ಬೆಂಗಳೂರಿನ ಸಂಸದರು, ಶಾಸಕರು ಮತ್ತೊಮ್ಮೆ ಸಭೆ ನಡೆಸಿ ಚರ್ಚಿಸುತ್ತೇವೆ. ಬೆಂಗಳೂರು ವಿಶ್ವ ದರ್ಜೆಯ ನಗರ ಮಾಡುವ ಗುರಿ ನಮಗಿದೆ. ಸದ್ಯದಲ್ಲೇ ಐಟಿಬಿಟಿ ಕಂಪನಿಗಳ ಸಭೆ ಕರೆಯುತ್ತೇನೆ. ನಗರದಲ್ಲಿ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳುವೆ. ಕಾರವಾರಕ್ಕೆ ತೆರಳಿ ಅತಿವೃಷ್ಟಿ ಬಗ್ಗೆ ಮಾಹಿತಿ ಪಡೆಯುವೆ. ಕೇಂದ್ರದಿಂದ ಹೆಚ್ಚಿನ ಅನುದಾನ ಸಿಗುವ ಭರವಸೆ ಇದೆ ಎಂದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…