ಮಧ್ಯಪ್ರದೇಶ,: ನಾನು ಅಕ್ರಮವಾಗಿ ಹಣ ಸಂಗ್ರಹಿಸಿಟ್ಟುಕೊಂಡಿದ್ದೇನೆ ಎಂಬ ಅನುಮಾನವಿದ್ದರೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನನ್ನ ಮನೆ ಮೇಲೂ ದಾಳಿ ಮಾಡಲಿ, ಇದನ್ನು ವಿರೋಧಿಸುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಮಧ್ಯಪ್ರದೇಶದ ಸಿಧಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ. ನಾನು ಅಕ್ರಮವಾಗಿ ಹಣ ಸಂಗ್ರಹಿಸಿಟ್ಟಿದ್ದೇನೆ ಎಂದಾದರೆ ನನ್ನ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಲಿ, ಇದನ್ನು ನಾನು ವಿರೋಧಿಸುವುದಿಲ್ಲ ಎಂದರು.
ಆದಾಯ ತೆರಿಗೆ ದಾಳಿ ನಂತರ ಕಾಂಗ್ರೆಸ್ ಮುಖಂಡರು ಹೇಳುತ್ತಾರೆ, ನಾವು ಜನಪ್ರತಿನಿಧಿಗಳು, ಹೀಗಾಗಿ ಯಾಕೆ ನಮ್ಮ ಮನೆ, ಕಚೇರಿ ಮೇಲೆ ದಾಳಿ ನಡೆಸಬೇಕು ಅಂತ..? ದೇಶದ ಕಾನೂನು ಎಲ್ಲರಿಗೂ ಒಂದೇ. ಒಂದು ವೇಳೆ ಮೋದಿ ಏನಾದರೂ ತಪ್ಪು ಮಾಡಿದರೂ ಕೂಡಾ ಮೋದಿ ಮನೆಯ ಮೇಲೂ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಲೇಬೇಕು ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆಯ ವೇಳೆ ಕರ್ನಾಟಕ ಸೇರಿ ವಿವಿಧ ರಾಜ್ಯಗಳಲ್ಲಿ ಪ್ರತಿಪಕ್ಷಗಳ ನಾಯಕರು ಮತ್ತವರ ಆಪ್ತರ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದರು. ಈ ಬಗ್ಗೆ ಸಾಕಷ್ಟು ಆಕ್ಷೇಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…