ನವದೆಹಲಿ: ನಾನು ಅಧಿಕಾರವನ್ನು ಬಯಸಿಲ್ಲ, ಜನ ಸೇವೆಯೇ ಗುರಿಯಾಗಿದೆ. ಇಂದು, ಮುಂದೆಯೂ ಅಧಿಕಾರದಲ್ಲಿರಲು ಬಯಸುವುದಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ನಿನ್ನೆ 85ನೇ ಮಾಸಿಕ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದ ವೇಳೆ ಆಯುಷ್ಮಾನ್ ಭಾರತದ ಫಲಾನುಭವಿಯೊಬ್ಬರು ಮೋದಿ ಅವರು ಸದಾ ಅಧಿಕಾರದಲ್ಲೇ ಮುಂದುವರಿಯಬೇಕು ಎಂದು ಆಶಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಮೋದಿ ಅವರು ನಾನು ಅಧಿಕಾದಲ್ಲಿ ಇರಲು ಬಯಸುವುದಿಲ್ಲ. ನಾನು ಕೇವಲ ಸೇವೆಯಲ್ಲಿ ಇರಲು ಬಯಸುತ್ತೇನೆ. ನನ್ನ ಪಾಲಿಗೆ ಈ ಹುದ್ದೆ, ಈ ಪ್ರಧಾನಿಗಿರಿ, ಈ ಎಲ್ಲಾ ವಿಷಯಗಳು ಅಧಿಕಾರಕ್ಕಾಗಿಯಲ್ಲ, ಎಲ್ಲಾ ಸೇವೆಗಾಗಿ ಆಗಿದೆ. ಸರ್ಕಾರದ ಹಲವು ಕಾರ್ಯಗಳು, ಯೋಜನೆಗಳು, ಮಾನವೀಯ ಸ್ಪಂದನೆಗಳಿಗೆ ಕುರಿತು ಮಾಡುವ ಕೆಲಸಗಳು ಸದಾ ನನಗೆ ವಿಶೇಷ ಸಂಭ್ರಮ ನೀಡುತ್ತದೆ ಎಂದು ಹೇಳಿದ್ದಾರೆ.
ಮಾಹಾಮಾರಿ ಕೊರೊನಾ ಹಾವಳಿ ಇನ್ನೂ ನಮ್ಮನ್ನು ಬಿಟ್ಟು ಹೋಗಿಲ್ಲ. ಈ ವೈರಸ್ ಹರಡದಂತೆ ಎಚ್ಚರವಾಗಿರಬೇಕು. ಈ ಬಗ್ಗೆ ಹೆಚ್ಚು ಜಾಗೃತವಾಗಿರುವುದು ನಮ್ಮೆಲ್ಲರ ಹೊಣೆ ಎಂದು ದೇಶದ ಜನತೆಗೆ ಮೋದಿ ಎಚ್ಚರಿಸಿದ್ದಾರೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…