ಮೈಸೂರು: ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸಾರಾ ಮಹೇಶ್ ಕಣಕ್ಕೆ ಇಳಿಯುತ್ತಾರೆ ಎಂಬ ಮಾತು ಕಳೆದ ನಾಲ್ಕು ದಿನಗಳಿಂದ ದಟ್ಟವಾಗಿ ಶುರುವಾಗಿತ್ತು. ಈ ಹಬ್ಬಿದ ವೇಗದಲ್ಲೇ ಈ ಮಾತನ್ನು ಖುದ್ದು ಸಾರಾ ಮಹೇಶ್ ಕಡಿಮೆ ಮಾಡುವ ಮಾತಾಡಿದ್ದಾರೆ. ಅಷ್ಟು ಮಾತ್ರವಲ್ಲ ತಮಗೆ ಚುನಾವಣಾ ರಾಜಕೀಯವೇ ಸಾಕಾಗಿದೆ ಎಂಬ ರೀತಿ ವೈರಾಗ್ಯದ ಮಾತನ್ನು ಹೇಳಿ ಅಚ್ಚರಿ ಮೂಡಿಸಿದ್ದಾರೆ.
ನಾನು ಲೋಕಸಭಾ ಚುನಾವಣೆಯ ಆಕಾಂಕ್ಷಿಯಲ್ಲ. ನಾನು ಆರ್ಥಿಕವಾಗಿ, ದೈಹಿಕವಾಗಿ, ಮಾನಸಿಕವಾಗಿ ಕುಸಿದಿದ್ದೇನೆ. ನನಗೆ ರೆಸ್ಟ್ ಬೇಕಿದೆ. ಹೀಗಾಗಿ ನಾನು ಟಿಕೆಟ್ ಆಕಾಂಕ್ಷಿಯಲ್ಲ ಎಂದು ಸ್ಪಷ್ಟವಾಗಿ ಹೇಳುವ ಮೂಲಕ ವಿಧಾನಸಭಾ ಚುನಾವಣೆಯ ಸೋಲು ತಮ್ಮನ್ನು ಮಾನಸಿಕವಾಗಿ ಕುಗ್ಗಿಸಿದೆ ಎಂಬುದನ್ನು ಬಹಿರಂಗವಾಗಿಯೆ ಒಪ್ಪಿಕೊಂಡಿದ್ದಾರೆ.
ಇದೇ ವೇಳೆ ನರೇಂದ್ರ ಮೋದಿ ಮತ್ತೊಮ್ಮೆ ಪಿಎಂ ಆಗಬೇಕು. ಸಂಸದ ಪ್ರತಾಪ್ ಸಿಂಹ 10 ವರ್ಷ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಬಿಜೆಪಿ ಮುಖಂಡರು ನನ್ನ ಅಭ್ಯರ್ಥಿಯಾಗುವ ವಿಚಾರದಲ್ಲಿ ಸಂಪರ್ಕಿಸಿದ್ದಾರೆ ಎಂಬುದೆಲ್ಲಾ ಊಹಾಪೋಹ ಎನ್ನುವ ಮೂಲಕ ಪ್ರತಾಪ್ ಸಿಂಹ ಪರವೂ ಬ್ಯಾಟ್ ಬೀಸಿದ್ದಾರೆ.
ಸದ್ಯಕ್ಕೆ ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ವಿಚಾರದಲ್ಲಿ ಊಹಾಪೋಹಗಳದ್ದೇ ಕಾರುಬಾರು. ಆದ್ರೆ ಸಾರಾ ಮಹೇಶ್ ಬ್ರೇಕ್ ಹಾಕಿ ಗಾಸಿಪ್ಗಳು ಹುಟ್ಟುವುದನ್ನು ಕಡಮೆ ಮಾಡಿದ್ದಾರೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…