ಮೈಸೂರು: ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸಾರಾ ಮಹೇಶ್ ಕಣಕ್ಕೆ ಇಳಿಯುತ್ತಾರೆ ಎಂಬ ಮಾತು ಕಳೆದ ನಾಲ್ಕು ದಿನಗಳಿಂದ ದಟ್ಟವಾಗಿ ಶುರುವಾಗಿತ್ತು. ಈ ಹಬ್ಬಿದ ವೇಗದಲ್ಲೇ ಈ ಮಾತನ್ನು ಖುದ್ದು ಸಾರಾ ಮಹೇಶ್ ಕಡಿಮೆ ಮಾಡುವ ಮಾತಾಡಿದ್ದಾರೆ. ಅಷ್ಟು ಮಾತ್ರವಲ್ಲ ತಮಗೆ ಚುನಾವಣಾ ರಾಜಕೀಯವೇ ಸಾಕಾಗಿದೆ ಎಂಬ ರೀತಿ ವೈರಾಗ್ಯದ ಮಾತನ್ನು ಹೇಳಿ ಅಚ್ಚರಿ ಮೂಡಿಸಿದ್ದಾರೆ.
ನಾನು ಲೋಕಸಭಾ ಚುನಾವಣೆಯ ಆಕಾಂಕ್ಷಿಯಲ್ಲ. ನಾನು ಆರ್ಥಿಕವಾಗಿ, ದೈಹಿಕವಾಗಿ, ಮಾನಸಿಕವಾಗಿ ಕುಸಿದಿದ್ದೇನೆ. ನನಗೆ ರೆಸ್ಟ್ ಬೇಕಿದೆ. ಹೀಗಾಗಿ ನಾನು ಟಿಕೆಟ್ ಆಕಾಂಕ್ಷಿಯಲ್ಲ ಎಂದು ಸ್ಪಷ್ಟವಾಗಿ ಹೇಳುವ ಮೂಲಕ ವಿಧಾನಸಭಾ ಚುನಾವಣೆಯ ಸೋಲು ತಮ್ಮನ್ನು ಮಾನಸಿಕವಾಗಿ ಕುಗ್ಗಿಸಿದೆ ಎಂಬುದನ್ನು ಬಹಿರಂಗವಾಗಿಯೆ ಒಪ್ಪಿಕೊಂಡಿದ್ದಾರೆ.
ಇದೇ ವೇಳೆ ನರೇಂದ್ರ ಮೋದಿ ಮತ್ತೊಮ್ಮೆ ಪಿಎಂ ಆಗಬೇಕು. ಸಂಸದ ಪ್ರತಾಪ್ ಸಿಂಹ 10 ವರ್ಷ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಬಿಜೆಪಿ ಮುಖಂಡರು ನನ್ನ ಅಭ್ಯರ್ಥಿಯಾಗುವ ವಿಚಾರದಲ್ಲಿ ಸಂಪರ್ಕಿಸಿದ್ದಾರೆ ಎಂಬುದೆಲ್ಲಾ ಊಹಾಪೋಹ ಎನ್ನುವ ಮೂಲಕ ಪ್ರತಾಪ್ ಸಿಂಹ ಪರವೂ ಬ್ಯಾಟ್ ಬೀಸಿದ್ದಾರೆ.
ಸದ್ಯಕ್ಕೆ ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ವಿಚಾರದಲ್ಲಿ ಊಹಾಪೋಹಗಳದ್ದೇ ಕಾರುಬಾರು. ಆದ್ರೆ ಸಾರಾ ಮಹೇಶ್ ಬ್ರೇಕ್ ಹಾಕಿ ಗಾಸಿಪ್ಗಳು ಹುಟ್ಟುವುದನ್ನು ಕಡಮೆ ಮಾಡಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…