ಶಿವಮೊಗ್ಗ : ಕಳೆದ ಬಾರಿ ಲೋಕಸಭಾ ಉಪ ಚುನಾವಣೆಯಲ್ಲಿ ಇಷ್ಟವಿಲ್ಲದಿದ್ದರೂ ಹಿರಿಯರ ವಿಶ್ವಾಸಕ್ಕೆ ತಲೆಬಾಗಿದ್ದೆ. ಈ ಬಾರಿ ನಾನು ಸೋಲೋಕೆ ಬಂದಿಲ್ಲ. ಈ ಬಾರಿ ಗೆಲ್ಲಲು ಬಂದಿದ್ದೇನೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದ್ದಾರೆ.
ಪೂರ್ವ ಸಿದ್ದತಾ ಪರೀಕ್ಷೆಯಲ್ಲಿ ( ಉಪ ಚುನಾವಣೆ) ಎಲ್ಲೆಲ್ಲಿ ತಪ್ಪಾಗಿದಿಯೋ ಅವೆಲ್ಲಾ ಸರಿಪಡಿಸಿಕೊಳ್ಳುತ್ತೇನೆ. ಈ ಬಾರಿ ದಡ ಸೇರುತ್ತೆನೆ ಎಂಬ ವಿಶ್ವಾಸವಿದೆ. ಈ ಬಾರಿಯೂ ನನ್ನನ್ನು ಅಭ್ಯರ್ಥಿಯನ್ನಾಗಿಸಿದ್ದಾರೆ. ನಿನ್ನೆ ಈ ಸಂಬಂಧ ಬೆಂಗಳೂರಿನಲ್ಲಿ ಚರ್ಚೆ ನಡೆದಿದೆ. ಕಾಂಗ್ರೆಸ್ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ. ನಾನು ಸೋತಿರಬಹುದು, ಆದರೆ, ಜನರ ಪರವಾದ ಹೋರಾಟವನ್ನು ಬಿಡುವುದಿಲ್ಲ ಎಂದು ಹೇಳಿದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಹೆಚ್ಚು ಮತಗಳಿವೆ ಹಾಗಾಗಿ, ಅವರಲ್ಲಿ ಕೆಲವರು ತಮ್ಮ ಪಕ್ಷದವರಿಗೆ ಟಿಕೆಟ್ ನೀಡಿ ಎಂದು ಹೇಳುತ್ತಿರಬಹುದು. ಆದರೆ, ಎಲ್ಲರೂ ಒಪ್ಪಿ ತಮ್ಮನ್ನು ಬೆಂಬಲಿಸಿ ಜಯ ತಂದು ಕೊಡುವ ವಿಶ್ವಾಸವಿದೆ ಎಂದರು.
ಲೋಕಸಭೆ ಉಪ ಚುನಾವಣೆಯಲ್ಲಿ ಸೋಲುಂಟಾದ ಬಳಿಕ ಮಧು ಬಂಗಾರಪ್ಪ ಅವರು ರಾಜಕಾರಣದಿಂದಲೇ ದೂರು ಉಳಿದಿದ್ದರು. ಪಕ್ಷದ ಯಾವ ಕಾರ್ಯಕ್ರಮವಕ್ಕೂ ಅವರು ಸಕ್ರಿಯವಾಗಿ ಪಾಲ್ಗೊಂಡಿದ್ದಿಲ್ಲ. ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಂದ ಹಿಡಿದು ಅನೇಕ ಪ್ರಮುಖ ಮುಖಂಡರು ಮಧು ಬಂಗಾರಪ್ಪ ಅವರ ಮನವೊಲಿಸಲು ಯತ್ನಿಸಿದರೂ ಯಾವುದೇ ಫಲ ಸಿಕ್ಕಿರಲಿಲ್ಲ. ಆದರೆ, ಇದೀಗ ಮಧು ಬಂಗಾರಪ್ಪ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಒಪ್ಪಿಕೊಂಡಿರುವುದು ಗಮನಾರ್ಹ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…