ದಾವಣಗೆರೆ: ಜಿಲ್ಲೆಯ ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಿಂತು ಗೆದ್ದು, ಶಾಸಕರಾಗಿದ್ದಂತ ಎಸ್ ಎ ರವೀಂದ್ರನಾಥ್ ಈಗಾಗಲೇ ಚುನಾವಣ ಕಣದಿಂದ ಹಿಂದೆ ಸರಿದಿದ್ದರು. ಈ ಬೆನ್ನಲ್ಲೇ ನಾನು ನಿಲ್ಲುವುದಿಲ್ಲ, ನನ್ನ ಕುಟುಂಬಸ್ಥರಿಗೂ ಟಿಕೆಟ್ ಬೇಡ ಎಂಬುದಾಗಿ ಪಕ್ಷ ನಿಷ್ಠೆಯನ್ನು ಮೆರೆದಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನ್ನ ಮೇಲೆ ಈ ಬಾರಿಯೂ ಸ್ಪರ್ಧಿಸುವಂತೆ ಬೆಂಬಲಿಗರ ಒತ್ತಡವಿದೆ. ಆದ್ರೇ ನಾನು ಆರೋಗ್ಯ ಸರಿಯಿಲ್ಲದ ಕಾರಣ ಸ್ವ ಇಚ್ಛೆಯಿಂದ ಚುನಾವಣಾ ಕಣದಿಂದ ಹಿಂದೆ ಸರಿಯುತ್ತಿರುವುದಾಗಿ ಮತ್ತೊಮ್ಮೆ ಸ್ಪಷ್ಟ ಪಡಿಸಿದರು.
ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನನ್ನ ಕುಟುಂಬಸ್ಥರಿಗೂ ಟಿಕೆಟ್ ಗಾಗಿ ಯಾವುದೇ ಲಾಭಿ ನಡೆಸಿಲ್ಲ. ನನಗೂ ಬೇಡ, ನನ್ನ ಮಕ್ಕಳಿಗೂ ಟಿಕೆಟ್ ಬೇಡ ಎಂಬುದಾಗಿ ತಿಳಿಸಿದರು.
ಅಂದಹಾಗೇ ದಾವಣಗೆರೆ ಉತ್ತ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಎ ರವೀಂದ್ರನಾಥ್ ಗೆ ಓರ್ವ ಪುತ್ರ, ಇಬ್ಬರು ಪುತ್ರಿಯರಿದ್ದಾರೆ. ಪುತ್ರ ಎಸ್ ಆರ್ ಬಸವರಾಜ್ ಶಿಗಮಗೊಂಡನಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯರಾಗಿದ್ದಾರೆ. ಇಬ್ಬರು ಪುತ್ರಿಯರಲ್ಲಿ ಓರ್ವ ಪುತ್ರಿ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯೆಯಾಗಿದ್ದರೇ, ಮತ್ತೋರ್ವ ಪುತ್ರಿ ಹಾಲಿ ಮಹಾನಗರ ಪಾಲಿಕೆ ಸದಸ್ಯೆಯಾಗಿದ್ದಾರೆ. ಹೀಗಿದ್ದೂ ಕುಟುಂಬದವರಿಗೆ, ಮಕ್ಕಳಿಗೆ ಟಿಕೆಟ್ ಬೇಡವೆಂದು ಬಿಜೆಪಿ ವರಿಷ್ಠರಿಗೆ ಮನವಿ ಮಾಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…