ದಾವಣಗೆರೆ: ಜಿಲ್ಲೆಯ ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಿಂತು ಗೆದ್ದು, ಶಾಸಕರಾಗಿದ್ದಂತ ಎಸ್ ಎ ರವೀಂದ್ರನಾಥ್ ಈಗಾಗಲೇ ಚುನಾವಣ ಕಣದಿಂದ ಹಿಂದೆ ಸರಿದಿದ್ದರು. ಈ ಬೆನ್ನಲ್ಲೇ ನಾನು ನಿಲ್ಲುವುದಿಲ್ಲ, ನನ್ನ ಕುಟುಂಬಸ್ಥರಿಗೂ ಟಿಕೆಟ್ ಬೇಡ ಎಂಬುದಾಗಿ ಪಕ್ಷ ನಿಷ್ಠೆಯನ್ನು ಮೆರೆದಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನ್ನ ಮೇಲೆ ಈ ಬಾರಿಯೂ ಸ್ಪರ್ಧಿಸುವಂತೆ ಬೆಂಬಲಿಗರ ಒತ್ತಡವಿದೆ. ಆದ್ರೇ ನಾನು ಆರೋಗ್ಯ ಸರಿಯಿಲ್ಲದ ಕಾರಣ ಸ್ವ ಇಚ್ಛೆಯಿಂದ ಚುನಾವಣಾ ಕಣದಿಂದ ಹಿಂದೆ ಸರಿಯುತ್ತಿರುವುದಾಗಿ ಮತ್ತೊಮ್ಮೆ ಸ್ಪಷ್ಟ ಪಡಿಸಿದರು.
ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನನ್ನ ಕುಟುಂಬಸ್ಥರಿಗೂ ಟಿಕೆಟ್ ಗಾಗಿ ಯಾವುದೇ ಲಾಭಿ ನಡೆಸಿಲ್ಲ. ನನಗೂ ಬೇಡ, ನನ್ನ ಮಕ್ಕಳಿಗೂ ಟಿಕೆಟ್ ಬೇಡ ಎಂಬುದಾಗಿ ತಿಳಿಸಿದರು.
ಅಂದಹಾಗೇ ದಾವಣಗೆರೆ ಉತ್ತ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಎ ರವೀಂದ್ರನಾಥ್ ಗೆ ಓರ್ವ ಪುತ್ರ, ಇಬ್ಬರು ಪುತ್ರಿಯರಿದ್ದಾರೆ. ಪುತ್ರ ಎಸ್ ಆರ್ ಬಸವರಾಜ್ ಶಿಗಮಗೊಂಡನಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯರಾಗಿದ್ದಾರೆ. ಇಬ್ಬರು ಪುತ್ರಿಯರಲ್ಲಿ ಓರ್ವ ಪುತ್ರಿ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯೆಯಾಗಿದ್ದರೇ, ಮತ್ತೋರ್ವ ಪುತ್ರಿ ಹಾಲಿ ಮಹಾನಗರ ಪಾಲಿಕೆ ಸದಸ್ಯೆಯಾಗಿದ್ದಾರೆ. ಹೀಗಿದ್ದೂ ಕುಟುಂಬದವರಿಗೆ, ಮಕ್ಕಳಿಗೆ ಟಿಕೆಟ್ ಬೇಡವೆಂದು ಬಿಜೆಪಿ ವರಿಷ್ಠರಿಗೆ ಮನವಿ ಮಾಡಿದ್ದಾರೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…