ಮಂಡ್ಯ:ನಾನು ಯಾವಾಗ ಸಾಯುತ್ತೇನೋ ಗೊತ್ತಿಲ್ಲ. ಇಸ್ರೇಲ್ ಗೆ ಹೋಗಿದ್ದಾಗಲೇ ಸಾಯಬೇಕಿತ್ತು. ಆದರೆ ಬದುಕಿ ಬಂದಿದ್ದೇನೆ. ನಾನು ಎಷ್ಟು ದಿನ ಬದುಕುತ್ತೇನೆ ಎನ್ನುವುದು ಮುಖ್ಯವಲ್ಲ.ಇದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಳವಳ್ಳಿಯಲ್ಲಿ ಹೇಳಿದ ಮಾತು.
ಶುಕ್ರವಾರ ಮಂಡ್ಯ ಜಿಲ್ಲೆಯ ಮಳವಳ್ಳಿ ಪ್ರಚಾರದ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಭಾವುಕರಾದ ಅವರು, ನಾನು ಈ ಹಿಂದೆಯೇ ಸಾಯಬೇಕಿತ್ತು. ಆದರೆ ದೇವರ ಆಶೀರ್ವಾದದಿಂದ ಬದುಕಿ ಬಂದಿದ್ದೇನೆ. ನಾನು ಎಷ್ಟು ದಿನ ಬದುಕಿರುತ್ತೇನೆ ಎನ್ನುವುದು ನನಗೆ ಗೊತ್ತಿಲ್ಲ. ನಾನು ಬದುಕಿರುವವರೆಗೂ ಜನರ ಸೇವೆಯನ್ನು ಮಾಡುತ್ತೇನೆ ಎಂದರು.
ಜನರ ಮೇಲೆ ನನಗಿರುವ ಪ್ರೀತಿಯನ್ನು ಹಾಳು ಮಾಡಲು ಈ ಜನ್ಮದಲ್ಲಿ ಯಾರಿಗೂ ಸಾಧ್ಯವಿಲ್ಲ. ನಾನು ಬದುಕಿರುವುದೇ ನಿಮ್ಮಂತಹವರ ಸೇವೆಗೆ. ನಾನು ಹಣ ಸಂಪಾದಿಸಬೇಕಿಲ್ಲ. ಹಣ ಸಂಪಾದನೆ ಮಾಡುವುದು ನನ್ನ ಉದ್ದೇಶವೂ ಅಲ್ಲ. ಎಷ್ಟು ದಿನ ಬದುಕುತ್ತೇನೆ ಎಂಬುದೂ ಮುಖ್ಯವಲ್ಲ. ದೇವರು ನನಗೆ ಕೊಟ್ಟಿರುವ ಈ ಅಧಿಕಾರವನ್ನು ಜನರ ಶ್ರೇಯೋಭಿವೃದ್ಧಿಗೆ ಬಳಸಿ, ಪ್ರತಿಯೊಂದು ಕುಟುಂಬವನ್ನು ಯಾವ ರೀತಿ ಬದುಕಿಸುತ್ತೇನೆ ಎಂಬುದೇ ನನ್ನ ಮುಂದಿರುವ ಸವಾಲು ಎಂದು ಹೇಳಿದರು.
ನಾನು ಮಾಧ್ಯಮಗಳಿಗೆ ಹೆದರುವುದಿಲ್ಲ. ನನ್ನನ್ನು ಹೆದರಿಸಲು ಮಾಧ್ಯಮಗಳಿಗೆ ಸಾಧ್ಯವಿಲ್ಲ. ಮಾಧ್ಯಮಗಳೆಲ್ಲವೂ ನನ್ನ ಜೀವನದೊಂದಿಗೆ ಚೆಲ್ಲಾಟವಾಡುತ್ತಿದೆ. ನಾನು ಏನು ಮಾತನಾಡಿದರೂ ಅದನ್ನು ತಿರುಚಿ ಬರೆಯುತ್ತಾರೆ. ಎಲ್ಲರೂ ಈ ರೀತಿಯಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ. ಮಾಧ್ಯಮಗಳು ನನ್ನ ಜೀವನದ ಜತೆ ಚೆಲ್ಲಾಟವಾಡುತ್ತಿವೆ. ನಿಮ್ಮ ಮನೆ ಟಿವಿ ತೆಗೆದಾಕಿ ಅಂತಾ ಕೆಲವು ಡಾಕ್ಟರ್ಗಳು ನನಗೆ ಸಲಹೆ ನೀಡಿದ್ದಾರೆ ಎಂದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…