ಮೈಸೂರು: ‘ ಭಾರತದ ಇತಿಹಾಸದಲ್ಲಿ ಒಂದು ರೈಲಿಗೆ ಹೆಸರನ್ನು ಇಡಲಾಗಿದೆ ಹೊರತು ಅದನ್ನು ಬದಲಾಯಿಸಿರುವ ಉದಾಹರಣೆ ಇಲ್ಲ, ಆದರೆ ನಾನೇ ಮೊದಲ ಬಾರಿಗೆ ರೈಲಿಗೆ ಇಟ್ಟ ಹೆಸರನ್ನು ಬದಲಾಯಿಸಿದ್ದೇನೆ’ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನಾನು ಉದ್ದೇಶಪೂರ್ವಕವಾಗಿಯೇ ಟಿಪ್ಪು ರೈಲಿನ ಹೆಸರನ್ನು ತೆಗೆಸುತ್ತಿದ್ದೇನೆ. ಟಿಪ್ಪು ಕೊಡುಗೆ ಮೈಸೂರಿಗೆ ಏನು? ಹೆಸರನ್ನು ಬದಲಾಯಿಸಬಾರದು ಎಂದು ಹೇಳುವವರು ಟಿಪ್ಪು ಮೈಸೂರಿಗೆ ನೀಡಿದ ಮೂರು ಸಾಧನೆಯನ್ನು ತಿಳಿಸಲಿ’ ಎಂದು ಸವಾಲು ಹಾಕಿದರು.
‘ಮೈಸೂರಿಗೆ ಒಡೆಯರ್ ಅವರು ನೀಡಿದ ನೂರು ಸಾಧನೆಯನ್ನು ನಾನು ಹೇಳಬಲ್ಲೆ, ಆದರೆ ಟಿಪ್ಪು ಸಾಧನೆ ಏನು? ಆತ ಮೈಸೂರಿನವನ? ಟಿಪ್ಪು ಶ್ರೀರಂಗಪಟ್ಟಣದವನು. ಹಾಗಿದ್ದ ಮೇಲೆ ಮೈಸೂರು ರೈಲಿಗೆ ಟಿಪ್ಪು ಹೆಸರನ್ನು ಏಕೆ ಇಡಬೇಕು’ ಎಂದು ಪ್ರಶ್ನಿಸಿದರು.
ಇದನ್ನೂ ಓದಿ: ಉಡುಪಿ : ಬಹುಕಾಲದ ಕನಸಾಗಿದ್ದ ಯಕ್ಷಗಾನದ ವೇಷ ಹಾಕಿ ಮಿಂಚಿದ ಬಹುಭಾಷಾ ಕಲಾವಿದ ರಮೇಶ್ ಅರವಿಂದ್ – Vishwanews24
‘ಕೆಲವರು ಹೊಸ ರೈಲನ್ನು ತರಬಹುದಿತ್ತು ಎಂದು ಹೇಳುತ್ತಿದ್ದಾರೆ. 2014 ರಲ್ಲಿ ಮೈಸೂರಿನಿಂದ ವಾರಣಾಸಿಗೆ ತಂದ ರೈಲಿನಿಂದ ಹಿಡಿದು ಕಾಚಿಗೂಡ ಎಕ್ಸ್ ಪ್ರೆಸ್, ಕೋಚುವೆಲ್, ಚೆನ್ನೈ ಎಕ್ಸ್ ಪ್ರೆಸ್, ಉದಯ್ ಪುರ ರೈಲು, ವಿಶ್ವಮಾನವ ರೈಲು ಸೇರಿದಂತೆ ಹತ್ತು ರೈಲುಗಳನ್ನು ಮೈಸೂರಿಗೆ ತಂದಿದ್ದೇನೆ. ಇಷ್ಟು ಕಡಿಮೆ ಅವಧಿಯಲ್ಲಿ ದೇಶದ ಯಾವ ಸಂಸದರೂ ಇಷ್ಟೊಂದು ರೈಲನ್ನು ಅವರ ಕ್ಷೇತ್ರಕ್ಕೆ ತಂದಂತಹ ಉದಾಹರಣೆ ಇಲ್ಲ, ಹೊಸ ರೈಲುಗಳನ್ನು ತರುವ ಜೊತೆಗೆ ರೈಲಿನ ಹೆಸರನ್ನು ನಾನು ಬದಲಾಯಿಸಿದ್ದೇನೆ. ಉದ್ದೇಶಪೂರ್ವಕವಾಗಿಯೇ ಟಿಪ್ಪು ರೈಲನ್ನು ಬದಲಾಯಿಸಿದ್ದು ಎಂಬುದಕ್ಕೆ ಸ್ಪಷ್ಟನೆಯನ್ನು ನೀಡುತ್ತಿದ್ದೇನೆ’ ಎಂದು ಹೇಳಿದರು.
‘ಈಗಾಗಲೇ ಕರ್ನಾಟಕದಲ್ಲಿ ಟಿಪ್ಪು ಜಯಂತಿಯನ್ನು ರದ್ದು ಮಾಡಲಾಗಿದೆ. ಅದೇ ರೀತಿ ರೈಲಿಗೆ ಇಟ್ಟಿದ್ದ ಹೆಸರನ್ನು ಬದಲಾಯಿಸಲಾಗಿದೆ. ಇದಕ್ಕೆ ಸಾರ್ವಜನಿಕರಿಂದ ಒಳ್ಳೆಯ ಅಭಿಪ್ರಾಯ ವ್ಯಕ್ತವಾಗಿದೆ’ ಎಂದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…