Featured

ನಾನು ಉದ್ದೇಶಪೂರ್ವಕವಾಗಿಯೇ ಟಿಪ್ಪು ರೈಲಿನ ಹೆಸರು ಬದಲಾಯಿಸಿದ್ದೇನೆ: ಸಂಸದ ಪ್ರತಾಪ ಸಿಂಹ – Vishwanews24

ನಾನು ಉದ್ದೇಶಪೂರ್ವಕವಾಗಿಯೇ ಟಿಪ್ಪು ರೈಲಿನ ಹೆಸರು ಬದಲಾಯಿಸಿದ್ದೇನೆ: ಪ್ರತಾಪ ಸಿಂಹ

ಮೈಸೂರು: ‘ ಭಾರತದ ಇತಿಹಾಸದಲ್ಲಿ ಒಂದು ರೈಲಿಗೆ ಹೆಸರನ್ನು ಇಡಲಾಗಿದೆ ಹೊರತು ಅದನ್ನು ಬದಲಾಯಿಸಿರುವ ಉದಾಹರಣೆ ಇಲ್ಲ, ಆದರೆ ನಾನೇ ಮೊದಲ ಬಾರಿಗೆ ರೈಲಿಗೆ ಇಟ್ಟ ಹೆಸರನ್ನು ಬದಲಾಯಿಸಿದ್ದೇನೆ’ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನಾನು ಉದ್ದೇಶಪೂರ್ವಕವಾಗಿಯೇ ಟಿಪ್ಪು ರೈಲಿನ ಹೆಸರನ್ನು ತೆಗೆಸುತ್ತಿದ್ದೇನೆ. ಟಿಪ್ಪು ಕೊಡುಗೆ ಮೈಸೂರಿಗೆ ಏನು? ಹೆಸರನ್ನು ಬದಲಾಯಿಸಬಾರದು ಎಂದು ಹೇಳುವವರು ಟಿಪ್ಪು ಮೈಸೂರಿಗೆ ನೀಡಿದ ಮೂರು ಸಾಧನೆಯನ್ನು ತಿಳಿಸಲಿ’ ಎಂದು ಸವಾಲು ಹಾಕಿದರು.

‘ಮೈಸೂರಿಗೆ ಒಡೆಯರ್ ಅವರು ನೀಡಿದ ನೂರು ಸಾಧನೆಯನ್ನು ನಾನು ಹೇಳಬಲ್ಲೆ, ಆದರೆ ಟಿಪ್ಪು ಸಾಧನೆ ಏನು? ಆತ ಮೈಸೂರಿನವನ? ಟಿಪ್ಪು ಶ್ರೀರಂಗಪಟ್ಟಣದವನು. ಹಾಗಿದ್ದ ಮೇಲೆ ಮೈಸೂರು ರೈಲಿಗೆ ಟಿಪ್ಪು ಹೆಸರನ್ನು ಏಕೆ ಇಡಬೇಕು’ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಉಡುಪಿ : ಬಹುಕಾಲದ ಕನಸಾಗಿದ್ದ ಯಕ್ಷಗಾನದ ವೇಷ ಹಾಕಿ ಮಿಂಚಿದ ಬಹುಭಾಷಾ ಕಲಾವಿದ ರಮೇಶ್ ಅರವಿಂದ್ – Vishwanews24

‘ಕೆಲವರು ಹೊಸ ರೈಲನ್ನು ತರಬಹುದಿತ್ತು ಎಂದು ಹೇಳುತ್ತಿದ್ದಾರೆ. 2014 ರಲ್ಲಿ ಮೈಸೂರಿನಿಂದ ವಾರಣಾಸಿಗೆ ತಂದ ರೈಲಿನಿಂದ ಹಿಡಿದು ಕಾಚಿಗೂಡ ಎಕ್ಸ್ ಪ್ರೆಸ್, ಕೋಚುವೆಲ್, ಚೆನ್ನೈ ಎಕ್ಸ್ ಪ್ರೆಸ್, ಉದಯ್ ಪುರ ರೈಲು, ವಿಶ್ವಮಾನವ ರೈಲು ಸೇರಿದಂತೆ ಹತ್ತು ರೈಲುಗಳನ್ನು ಮೈಸೂರಿಗೆ ತಂದಿದ್ದೇನೆ. ಇಷ್ಟು ಕಡಿಮೆ ಅವಧಿಯಲ್ಲಿ ದೇಶದ ಯಾವ ಸಂಸದರೂ ಇಷ್ಟೊಂದು ರೈಲನ್ನು ಅವರ ಕ್ಷೇತ್ರಕ್ಕೆ ತಂದಂತಹ ಉದಾಹರಣೆ ಇಲ್ಲ, ಹೊಸ ರೈಲುಗಳನ್ನು ತರುವ ಜೊತೆಗೆ ರೈಲಿನ ಹೆಸರನ್ನು ನಾನು ಬದಲಾಯಿಸಿದ್ದೇನೆ. ಉದ್ದೇಶಪೂರ್ವಕವಾಗಿಯೇ ಟಿಪ್ಪು ರೈಲನ್ನು ಬದಲಾಯಿಸಿದ್ದು ಎಂಬುದಕ್ಕೆ ಸ್ಪಷ್ಟನೆಯನ್ನು ನೀಡುತ್ತಿದ್ದೇನೆ’ ಎಂದು ಹೇಳಿದರು.

‘ಈಗಾಗಲೇ ಕರ್ನಾಟಕದಲ್ಲಿ ಟಿಪ್ಪು ಜಯಂತಿಯನ್ನು ರದ್ದು ಮಾಡಲಾಗಿದೆ. ಅದೇ ರೀತಿ ರೈಲಿಗೆ ಇಟ್ಟಿದ್ದ ಹೆಸರನ್ನು ಬದಲಾಯಿಸಲಾಗಿದೆ. ಇದಕ್ಕೆ ಸಾರ್ವಜನಿಕರಿಂದ ಒಳ್ಳೆಯ ಅಭಿಪ್ರಾಯ ವ್ಯಕ್ತವಾಗಿದೆ’ ಎಂದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

16 hours ago