Featured

ನಾನು ಉದ್ದೇಶಪೂರ್ವಕವಾಗಿಯೇ ಟಿಪ್ಪು ರೈಲಿನ ಹೆಸರು ಬದಲಾಯಿಸಿದ್ದೇನೆ: ಸಂಸದ ಪ್ರತಾಪ ಸಿಂಹ – Vishwanews24

ನಾನು ಉದ್ದೇಶಪೂರ್ವಕವಾಗಿಯೇ ಟಿಪ್ಪು ರೈಲಿನ ಹೆಸರು ಬದಲಾಯಿಸಿದ್ದೇನೆ: ಪ್ರತಾಪ ಸಿಂಹ

ಮೈಸೂರು: ‘ ಭಾರತದ ಇತಿಹಾಸದಲ್ಲಿ ಒಂದು ರೈಲಿಗೆ ಹೆಸರನ್ನು ಇಡಲಾಗಿದೆ ಹೊರತು ಅದನ್ನು ಬದಲಾಯಿಸಿರುವ ಉದಾಹರಣೆ ಇಲ್ಲ, ಆದರೆ ನಾನೇ ಮೊದಲ ಬಾರಿಗೆ ರೈಲಿಗೆ ಇಟ್ಟ ಹೆಸರನ್ನು ಬದಲಾಯಿಸಿದ್ದೇನೆ’ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನಾನು ಉದ್ದೇಶಪೂರ್ವಕವಾಗಿಯೇ ಟಿಪ್ಪು ರೈಲಿನ ಹೆಸರನ್ನು ತೆಗೆಸುತ್ತಿದ್ದೇನೆ. ಟಿಪ್ಪು ಕೊಡುಗೆ ಮೈಸೂರಿಗೆ ಏನು? ಹೆಸರನ್ನು ಬದಲಾಯಿಸಬಾರದು ಎಂದು ಹೇಳುವವರು ಟಿಪ್ಪು ಮೈಸೂರಿಗೆ ನೀಡಿದ ಮೂರು ಸಾಧನೆಯನ್ನು ತಿಳಿಸಲಿ’ ಎಂದು ಸವಾಲು ಹಾಕಿದರು.

‘ಮೈಸೂರಿಗೆ ಒಡೆಯರ್ ಅವರು ನೀಡಿದ ನೂರು ಸಾಧನೆಯನ್ನು ನಾನು ಹೇಳಬಲ್ಲೆ, ಆದರೆ ಟಿಪ್ಪು ಸಾಧನೆ ಏನು? ಆತ ಮೈಸೂರಿನವನ? ಟಿಪ್ಪು ಶ್ರೀರಂಗಪಟ್ಟಣದವನು. ಹಾಗಿದ್ದ ಮೇಲೆ ಮೈಸೂರು ರೈಲಿಗೆ ಟಿಪ್ಪು ಹೆಸರನ್ನು ಏಕೆ ಇಡಬೇಕು’ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಉಡುಪಿ : ಬಹುಕಾಲದ ಕನಸಾಗಿದ್ದ ಯಕ್ಷಗಾನದ ವೇಷ ಹಾಕಿ ಮಿಂಚಿದ ಬಹುಭಾಷಾ ಕಲಾವಿದ ರಮೇಶ್ ಅರವಿಂದ್ – Vishwanews24

‘ಕೆಲವರು ಹೊಸ ರೈಲನ್ನು ತರಬಹುದಿತ್ತು ಎಂದು ಹೇಳುತ್ತಿದ್ದಾರೆ. 2014 ರಲ್ಲಿ ಮೈಸೂರಿನಿಂದ ವಾರಣಾಸಿಗೆ ತಂದ ರೈಲಿನಿಂದ ಹಿಡಿದು ಕಾಚಿಗೂಡ ಎಕ್ಸ್ ಪ್ರೆಸ್, ಕೋಚುವೆಲ್, ಚೆನ್ನೈ ಎಕ್ಸ್ ಪ್ರೆಸ್, ಉದಯ್ ಪುರ ರೈಲು, ವಿಶ್ವಮಾನವ ರೈಲು ಸೇರಿದಂತೆ ಹತ್ತು ರೈಲುಗಳನ್ನು ಮೈಸೂರಿಗೆ ತಂದಿದ್ದೇನೆ. ಇಷ್ಟು ಕಡಿಮೆ ಅವಧಿಯಲ್ಲಿ ದೇಶದ ಯಾವ ಸಂಸದರೂ ಇಷ್ಟೊಂದು ರೈಲನ್ನು ಅವರ ಕ್ಷೇತ್ರಕ್ಕೆ ತಂದಂತಹ ಉದಾಹರಣೆ ಇಲ್ಲ, ಹೊಸ ರೈಲುಗಳನ್ನು ತರುವ ಜೊತೆಗೆ ರೈಲಿನ ಹೆಸರನ್ನು ನಾನು ಬದಲಾಯಿಸಿದ್ದೇನೆ. ಉದ್ದೇಶಪೂರ್ವಕವಾಗಿಯೇ ಟಿಪ್ಪು ರೈಲನ್ನು ಬದಲಾಯಿಸಿದ್ದು ಎಂಬುದಕ್ಕೆ ಸ್ಪಷ್ಟನೆಯನ್ನು ನೀಡುತ್ತಿದ್ದೇನೆ’ ಎಂದು ಹೇಳಿದರು.

‘ಈಗಾಗಲೇ ಕರ್ನಾಟಕದಲ್ಲಿ ಟಿಪ್ಪು ಜಯಂತಿಯನ್ನು ರದ್ದು ಮಾಡಲಾಗಿದೆ. ಅದೇ ರೀತಿ ರೈಲಿಗೆ ಇಟ್ಟಿದ್ದ ಹೆಸರನ್ನು ಬದಲಾಯಿಸಲಾಗಿದೆ. ಇದಕ್ಕೆ ಸಾರ್ವಜನಿಕರಿಂದ ಒಳ್ಳೆಯ ಅಭಿಪ್ರಾಯ ವ್ಯಕ್ತವಾಗಿದೆ’ ಎಂದರು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

3 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

4 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

4 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

4 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago