ವಿಜಯಪುರ : ‘ನಾನು ಎಂದೂ ಅಧಿಕಾರದ ಹಿಂದೆ ಹೋಗಿಲ್ಲ, ನನ್ನ ಪ್ರಯತ್ನಗಳ ಫಲವಾಗಿ ಅಧಿಕಾರ ಪಡೆದುಕೊಂಡಿದ್ದೇನೆʼ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು
ರವಿವಾರ ವಿಜಯಪುರ ನಗರದ ಬಿಎಲ್ಡಿಇ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಫ.ಗು.ಹಳಕಟ್ಟಿ, ಬಂಥನಾಳ ಸಂಗನಬಸವ ಶಿವಯೋಗಿಗಳು, ಬಿ.ಎಂ.ಪಾಟೀಲ ಮತ್ತು ಬಂಗಾರಮ್ಮ ಸಜ್ಜನ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1999ರಲ್ಲಿ ವಿಪಕ್ಷ ನಾಯಕನಾಗಿ ಹೋರಾಟ ಮಾಡಿದೆ, ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿದೆ. ಆದರೆ, ನಾಲ್ಕು ತಿಂಗಳಲ್ಲಿ ಪಕ್ಷ ಸೇರಿದ ಎಸ್.ಎಂ.ಕೃಷ್ಣ ಸಿಎಂ ಆದರು. ರಾಜಕೀಯವಾಗಿ ಅವಕಾಶ ತಪ್ಪಿರುವ ಬಗ್ಗೆ ನನಗೆ ಬೇಸರವಿಲ್ಲ ಎಂದು ಅವರು ಹೇಳಿದರು.
ನಾನು ಸಣ್ಣ ಬಾಲಕನಾಗಿದ್ದಾಗ ರಝಾಕರಿಂದಾಗಿ ನನ್ನ ತಾಯಿ, ಸಹೋದರಿಯನ್ನು ಕಳೆದುಕೊಂಡೆ, ತಂದೆಯ ಆಸರೆಯಲ್ಲಿ ಬೆಳೆದೆ. ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಹುದ್ದೆಯಿಂದ ಎಐಸಿಸಿ ಹುದ್ದೆವರೆಗೂ ಬಂದಿದ್ದೇನೆ. ಮನಸ್ಸಿನಲ್ಲಿ ದುರಾಸೆ ಇಟ್ಟುಕೊಂಡು ಮಾಡುವ ಕೆಲಸಗಳಿಂದ ಏನೂ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…