Featured

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ

ಮೈಸೂರು: “ನಾನು ಕಂಬಳವನ್ನು ವಿರೋಧಿಸುತ್ತಿಲ್ಲ. ಅದು ನಮ್ಮ ರಾಜ್ಯದ ಹೆಮ್ಮೆ. ಆದರೆ, ಮೈಸೂರಿನ ಜನತೆಯ ಭಾವನೆಯನ್ನು ಪ್ರತಿಧ್ವನಿಸುವ ನನ್ನ ನಿರಂತರ ನಿಲುವೇನೆಂದರೆ, ಈ ಸಾಂಪ್ರದಾಯಿಕ ಕ್ರೀಡೆಗೆ ಅದರದ್ದೇ ಆದ ಮೂಲ ನೆಲದಲ್ಲಿ ಗರಿಷ್ಠ ಉತ್ತೇಜನ ಮತ್ತು ಆಚರಣೆಯ ಗೌರವ ಸಿಗಬೇಕೇ ಹೊರತು, ಈಗಾಗಲೇ ತೀವ್ರ ಆಡಳಿತಾತ್ಮಕ ಸವಾಲುಗಳನ್ನು ಎದುರಿಸುತ್ತಿರುವ ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು’ ಎಂದು ಮೈಸೂರು ರಾಜವಂಶಸ್ಥ ಮತ್ತು ಸಂಸದ ಯದುವೀರ್ ಒಡೆಯರ್ ಸ್ಪಷ್ಟನೆ ನೀಡಿದ್ದಾರೆ.

ಮೈಸೂರು ದಸರಾದಲ್ಲಿ ಕಂಬಳ ಸೇರ್ಪಡೆ ಕುರಿತು ಭಾರೀ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಎಕ್ಸ್ ಪೋಸ್ಟ್ ಮಾಡಿರುವ ಯದುವೀರ್ ಅವರು ಶುಕ್ರವಾರ ನಡೆದ ಸಭೆಯಲ್ಲಿ ಕಂಬಳದ ಸೇರ್ಪಡೆಯನ್ನು ಪ್ರಶ್ನಿಸಿದೆ ಮತ್ತು ಮರುಪರಿಶೀಲಿಸುವಂತೆ ಅಧಿಕೃತವಾಗಿ ವಿನಂತಿಸಿದೆ. ಈ ವಿಷಯದಲ್ಲಿ ನಾನು ಒಬ್ಬಂಟಿಯಾಗಿರಲಿಲ್ಲ. ಇತರ ಹಲವಾರು ನಾಯಕರು ಮತ್ತು ಸಮಿತಿಯ ಸದಸ್ಯರು ಸಹ ಇದೇ ರೀತಿಯ ಕಳಕಳಿಯನ್ನು ವ್ಯಕ್ತಪಡಿಸಿದ್ದಾರೆ ಎಂದು ಎಕ್ಸ್ ಪೋಸ್ಟ್ ಮಾಡಿದ್ದಾರೆ.

ಕಂಬಳದ ಸೇರ್ಪಡೆಗಾಗಿ ತೀವ್ರವಾಗಿ ಒತ್ತಾಯಿಸುತ್ತಿರುವ ಶಾಸಕ ಅಶೋಕ್ ಕುಮಾರ್ ರೈ ಅವರು ನನ್ನ ಹೇಳಿಕೆಗಳನ್ನು ತಪ್ಪಾಗಿ ಉಲ್ಲೇಖಿಸಿರುವುದು ಅತ್ಯಂತ ದುರದೃಷ್ಟಕರ ಮತ್ತು ತೀವ್ರ ವಿಷಾದನೀಯ. ನಮ್ಮ ರಾಜ್ಯ ಹಬ್ಬಕ್ಕೆ ಸಂಬಂಧಿಸಿದ ಉನ್ನತ ಮಟ್ಟದ ಸಮಿತಿಯ ನಡಾವಳಿಗಳನ್ನು ಒಬ್ಬ ಜನಪ್ರತಿನಿಧಿಯು ಉದ್ದೇಶಪೂರ್ವಕವಾಗಿ ತಪ್ಪಾಗಿ ಬಿಂಬಿಸುವುದು ಅವರ ಸ್ಥಾನಕ್ಕೆ ತಕ್ಕುದಲ್ಲದ ಮತ್ತು ಒಪ್ಪಿಕೊಳ್ಳಲು ಸಾಧ್ಯವಿಲ್ಲದ ನಡವಳಿಕೆಯಾಗಿದೆ” ಎಂದು ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಗಂಣದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ‘ನಾಡಹಬ್ಬ ದಸರಾ – 2026’ ಆಚರಣೆಗೆ ಸಂಬಂಧಿಸಿ ಪೂರ್ವಭಾವಿ ಸಭೆ ನಡೆಸಿ ಹಲವು ವಿಷಯಗಳನ್ನು ಸುದೀರ್ಘವಾಗಿ ಚರ್ಚಿಸಲಾಗಿದ್ದು ಕಂಬಳದ ವಿಚಾರವು ಚರ್ಚೆಗೆ ಬಂದಿದೆ. ಸದ್ಯ ಕಂಬಳ
ಆಯೋಜನೆ ವಿಚಾರ ಜಟಾಪಟಿಗೆ ಕಾರಣವಾಗಿದೆ.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

14 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

15 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

15 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

15 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

15 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

16 hours ago