ಮಂಗಳೂರು :ಗೆಲ್ಲುವ ಅಭ್ಯರ್ಥಿಯನ್ನು ಕಾಂಗ್ರೇಸ್ಸ್ ಪಕ್ಷ ಆಯ್ಕೆ ಮಾಡಿದೆ. ಯುವಕರಿಗೆ ಅವಕಾಶ ಕೊಡಲು ನನಗೆ ದೇವರ ಆದೇಶ ಬಂದಿದೆ. ಕಾಂಗ್ರೇಸ್ ಪಕ್ಷವು ಅಳೆದು – ತೂಗಿ – ಅರೆದು ಸಮರ್ಥ ಯುವ ನಾಯಕನನ್ನು ಆರಿಸಿದೆ. ಮಿಥುನ್ ಗೆಲ್ಲುತ್ತಾರೆ ಎಂದು ನನಗೆ ನಿನ್ನೆ ರಾತ್ರಿ ಕುದ್ರೋಳಿ ಗೋಕರ್ಣಾಥೇಶ್ವರ ಕನಸಿನಲ್ಲಿ ಬಂದು ಹೇಳಿ ಹೋಗಿದ್ದಾರೆ ಎಂದು ಜಿಲ್ಲೆಯ ಹಿರಿಯ ಕಾಂಗ್ರೇಸ್ ನಾಯಕ ಜನಾರ್ಧನ ಪೂಜಾರಿ ಹೇಳಿದರು.
ನಾಮಪತ್ರ ಸಲ್ಲಿಸುವ ಮೊದಲು ಕಾಂಗ್ರೆಸ್ ಪಕ್ಷದ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಮಿಥುನ್ ರೈ ದೇವಸ್ಥಾನ – ಮಸೀದಿ – ಚರ್ಚುಗಳಿಗೆ ಭೇಟಿ ಕೊಟ್ಟಿದ್ದು, ನಂತರ ಅವರು ಜನಾಧನ ಪೂಜಾರಿಯವರ ಆಶಿರ್ವಾದ ಪಡೆಯಲು ಮತ್ತು ಪೂಜೆ ನೆರವೇರಿಸಲು ಕುದ್ರೋಳಿ ಗೂಕರ್ಣನಾಥೇಶ್ವರ ದೇಗುಲಕ್ಕೆ ಆಗಮಿಸಿದ್ದರು.
ಈ ಸಂದರ್ಭ ಮಾತನಾಡಿದ ಜನಾರ್ದನ ಪೂಜಾರಿ ಅವರು, ನನಗೆ ಅಹಂಕಾರ ಬಂದಿದೆ ಎಂದು ದೇವರು ಎಚ್ಚರಿಸಿದ್ದಾನೆ. ನಿನ್ನೆ ನಳಿನ್ ಕುಮಾರ್ ಕಟೀಲ್ ಗೆಲ್ಲುತ್ತೇನೆ ಎಂದು ಹೇಳಿದ್ದೆ. ನಾನು ನಳಿನ್ ಗೆ ಹಿರಿಯನಾಗಿ ಕೊಟ್ಟ ಆಶಿರ್ವಾದ. ಅದನ್ನು ನಾನು ಈ ಮೊದಲು 2 ಬಾರಿ ಕೊಟ್ಟಿದ್ದೇನೆ. ನಾನು ಕಾಂಗ್ರೆಸ್ ಪಕ್ಷದವ. ನಾನು ಮಿಥುನ್ ಜೊತೆಯಾಗಿ ಸಾಗುತ್ತೇನೆ. ಗೆಲುವು ಖಂಡಿತಾ ಮಿಥುನ್ ಗೆ ಒಲಿದು ಬರುತ್ತದೆ ಎಂದು ಅಭಿಪ್ರಾಯಪಟ್ಟರು.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…