ಮಂಗಳೂರು :ಗೆಲ್ಲುವ ಅಭ್ಯರ್ಥಿಯನ್ನು ಕಾಂಗ್ರೇಸ್ಸ್ ಪಕ್ಷ ಆಯ್ಕೆ ಮಾಡಿದೆ. ಯುವಕರಿಗೆ ಅವಕಾಶ ಕೊಡಲು ನನಗೆ ದೇವರ ಆದೇಶ ಬಂದಿದೆ. ಕಾಂಗ್ರೇಸ್ ಪಕ್ಷವು ಅಳೆದು – ತೂಗಿ – ಅರೆದು ಸಮರ್ಥ ಯುವ ನಾಯಕನನ್ನು ಆರಿಸಿದೆ. ಮಿಥುನ್ ಗೆಲ್ಲುತ್ತಾರೆ ಎಂದು ನನಗೆ ನಿನ್ನೆ ರಾತ್ರಿ ಕುದ್ರೋಳಿ ಗೋಕರ್ಣಾಥೇಶ್ವರ ಕನಸಿನಲ್ಲಿ ಬಂದು ಹೇಳಿ ಹೋಗಿದ್ದಾರೆ ಎಂದು ಜಿಲ್ಲೆಯ ಹಿರಿಯ ಕಾಂಗ್ರೇಸ್ ನಾಯಕ ಜನಾರ್ಧನ ಪೂಜಾರಿ ಹೇಳಿದರು.
ನಾಮಪತ್ರ ಸಲ್ಲಿಸುವ ಮೊದಲು ಕಾಂಗ್ರೆಸ್ ಪಕ್ಷದ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಮಿಥುನ್ ರೈ ದೇವಸ್ಥಾನ – ಮಸೀದಿ – ಚರ್ಚುಗಳಿಗೆ ಭೇಟಿ ಕೊಟ್ಟಿದ್ದು, ನಂತರ ಅವರು ಜನಾಧನ ಪೂಜಾರಿಯವರ ಆಶಿರ್ವಾದ ಪಡೆಯಲು ಮತ್ತು ಪೂಜೆ ನೆರವೇರಿಸಲು ಕುದ್ರೋಳಿ ಗೂಕರ್ಣನಾಥೇಶ್ವರ ದೇಗುಲಕ್ಕೆ ಆಗಮಿಸಿದ್ದರು.
ಈ ಸಂದರ್ಭ ಮಾತನಾಡಿದ ಜನಾರ್ದನ ಪೂಜಾರಿ ಅವರು, ನನಗೆ ಅಹಂಕಾರ ಬಂದಿದೆ ಎಂದು ದೇವರು ಎಚ್ಚರಿಸಿದ್ದಾನೆ. ನಿನ್ನೆ ನಳಿನ್ ಕುಮಾರ್ ಕಟೀಲ್ ಗೆಲ್ಲುತ್ತೇನೆ ಎಂದು ಹೇಳಿದ್ದೆ. ನಾನು ನಳಿನ್ ಗೆ ಹಿರಿಯನಾಗಿ ಕೊಟ್ಟ ಆಶಿರ್ವಾದ. ಅದನ್ನು ನಾನು ಈ ಮೊದಲು 2 ಬಾರಿ ಕೊಟ್ಟಿದ್ದೇನೆ. ನಾನು ಕಾಂಗ್ರೆಸ್ ಪಕ್ಷದವ. ನಾನು ಮಿಥುನ್ ಜೊತೆಯಾಗಿ ಸಾಗುತ್ತೇನೆ. ಗೆಲುವು ಖಂಡಿತಾ ಮಿಥುನ್ ಗೆ ಒಲಿದು ಬರುತ್ತದೆ ಎಂದು ಅಭಿಪ್ರಾಯಪಟ್ಟರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…