ಬೆಂಗಳೂರು: “ನನ್ನ ಹೋರಾಟ ಬಿಜೆಪಿಯವರ ವಿರುದ್ಧ ಮಾತ್ರ. ಸಿದ್ದರಾಮಯ್ಯ, ದಿನೇಶ್ ವಿರುದ್ಧ ಹೋರಾಟ ಅಲ್ಲ,” ಎಂದು ಡಿಕೆ ಶಿವಕುಮಾರ್, ತಿಳಿಸಿದ್ದಾರೆ..
“ನಾನೇಕೆ ಸಿದ್ದರಾಮಯ್ಯ ವಿರುದ್ಧ ಮಾತನಾಡ್ಲಿ? ಗದ್ದುಗೆ ಏರೋಕೆ ನನಗೆ ಯಾವುದೇ ಆತುರ ಇಲ್ಲ. ನಾನು ಗಾಂಧಿ ಕುಟುಂಬಕ್ಕೆ ನಿಷ್ಠನಾಗಿದ್ದೇನೆ. ಅಧಿಕಾರ ಹುಡುಕಿಕೊಂಡು ಹೋಗುವ ಅಗತ್ಯ ಇಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಡಿಕೆಶಿ ಗೊತ್ತು. ಲಾಬಿ ಮಾಡಿ ಅಧಿಕಾರ ಪಡೆಯುವ ಅಗತ್ಯ ಇಲ್ಲ,” ಎನ್ನುವ ಮೂಲಕ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯತ್ನಿಸುತ್ತಿಲ್ಲ ಎಂಬುದನ್ನು ತಿಳಿಸಿದರು.
“ಹಣೆಬರಹದಲ್ಲಿ ಬರೆದಿದ್ರೆ ಬಂದೇ ಬರತ್ತೆ. ಲಕ್ಷ್ಮಣ ಸವದಿ ನೋಡಿ. ಶಾಸಕರಲ್ಲದೇ ಇದ್ದರೂ ಮಂತ್ರಿ ಆದರು. ಉಪಮುಖ್ಯಮಂತ್ರಿ ಕೂಡ ಆದರು. ಅವರ ಹಣೆಯಲ್ಲಿ ಬರೆದಿತ್ತು, ಅದಕ್ಕೆ ಆಗಿದ್ದಾರೆ,” ಎಂದರು.
“ಒಂದು ಕಾಲ ಇತ್ತು, ನಾವು ಮಾಡಿದ ಒಳ್ಳೆಯ ಮತ್ತು ಕೆಟ್ಟ ಕಾರ್ಯಗಳು ನಮ್ಮ ಮಕ್ಕಳು, ಮೊಮ್ಮಕ್ಕಳು ಅನುಭವಿಸುತ್ತಿದ್ದರು. ಆದ್ರೆ ಈಗ ನಾವು ಮಾಡಿದ್ದು ನಾವೇ ಅನುಭವಿಸಬೇಕು. ಈಗ ಕಾಲ ಎಲ್ಲವೂ ಬದಲಾಗಿದೆ. ಅವರಿಗಾಗಿ ಮಂತ್ರಿ ಸ್ಥಾನವನ್ನ ಇಟ್ಟುಕೊಂಡಿದ್ದಾರೆ. ಆದಷ್ಟು ಬೇಗ ಅವರೆಲ್ಲ ಮಂತ್ರಿಯಾಗಲಿ,” ಎಂದರು.
ಇಂದಿರಾ ಕ್ಯಾಂಟೀನ್ ವಿಚಾರದಲ್ಲಿ ಸರ್ಕಾರ ಅನುದಾನ ಕಡಿತ ಮಾಡಿದ್ರೆ 100 ಶಾಸಕರ ಪರವಾಗಿ ನಾನು ಹೋರಾಟ ಮಾಡ್ತೇನೆ,” ಎಂದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…