ಬೆಂಗಳೂರು: “ನನ್ನ ಹೋರಾಟ ಬಿಜೆಪಿಯವರ ವಿರುದ್ಧ ಮಾತ್ರ. ಸಿದ್ದರಾಮಯ್ಯ, ದಿನೇಶ್ ವಿರುದ್ಧ ಹೋರಾಟ ಅಲ್ಲ,” ಎಂದು ಡಿಕೆ ಶಿವಕುಮಾರ್, ತಿಳಿಸಿದ್ದಾರೆ..
“ನಾನೇಕೆ ಸಿದ್ದರಾಮಯ್ಯ ವಿರುದ್ಧ ಮಾತನಾಡ್ಲಿ? ಗದ್ದುಗೆ ಏರೋಕೆ ನನಗೆ ಯಾವುದೇ ಆತುರ ಇಲ್ಲ. ನಾನು ಗಾಂಧಿ ಕುಟುಂಬಕ್ಕೆ ನಿಷ್ಠನಾಗಿದ್ದೇನೆ. ಅಧಿಕಾರ ಹುಡುಕಿಕೊಂಡು ಹೋಗುವ ಅಗತ್ಯ ಇಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಡಿಕೆಶಿ ಗೊತ್ತು. ಲಾಬಿ ಮಾಡಿ ಅಧಿಕಾರ ಪಡೆಯುವ ಅಗತ್ಯ ಇಲ್ಲ,” ಎನ್ನುವ ಮೂಲಕ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯತ್ನಿಸುತ್ತಿಲ್ಲ ಎಂಬುದನ್ನು ತಿಳಿಸಿದರು.
“ಹಣೆಬರಹದಲ್ಲಿ ಬರೆದಿದ್ರೆ ಬಂದೇ ಬರತ್ತೆ. ಲಕ್ಷ್ಮಣ ಸವದಿ ನೋಡಿ. ಶಾಸಕರಲ್ಲದೇ ಇದ್ದರೂ ಮಂತ್ರಿ ಆದರು. ಉಪಮುಖ್ಯಮಂತ್ರಿ ಕೂಡ ಆದರು. ಅವರ ಹಣೆಯಲ್ಲಿ ಬರೆದಿತ್ತು, ಅದಕ್ಕೆ ಆಗಿದ್ದಾರೆ,” ಎಂದರು.
“ಒಂದು ಕಾಲ ಇತ್ತು, ನಾವು ಮಾಡಿದ ಒಳ್ಳೆಯ ಮತ್ತು ಕೆಟ್ಟ ಕಾರ್ಯಗಳು ನಮ್ಮ ಮಕ್ಕಳು, ಮೊಮ್ಮಕ್ಕಳು ಅನುಭವಿಸುತ್ತಿದ್ದರು. ಆದ್ರೆ ಈಗ ನಾವು ಮಾಡಿದ್ದು ನಾವೇ ಅನುಭವಿಸಬೇಕು. ಈಗ ಕಾಲ ಎಲ್ಲವೂ ಬದಲಾಗಿದೆ. ಅವರಿಗಾಗಿ ಮಂತ್ರಿ ಸ್ಥಾನವನ್ನ ಇಟ್ಟುಕೊಂಡಿದ್ದಾರೆ. ಆದಷ್ಟು ಬೇಗ ಅವರೆಲ್ಲ ಮಂತ್ರಿಯಾಗಲಿ,” ಎಂದರು.
ಇಂದಿರಾ ಕ್ಯಾಂಟೀನ್ ವಿಚಾರದಲ್ಲಿ ಸರ್ಕಾರ ಅನುದಾನ ಕಡಿತ ಮಾಡಿದ್ರೆ 100 ಶಾಸಕರ ಪರವಾಗಿ ನಾನು ಹೋರಾಟ ಮಾಡ್ತೇನೆ,” ಎಂದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…