ಬೆಂಗಳೂರು: “ನನ್ನ ಹೋರಾಟ ಬಿಜೆಪಿಯವರ ವಿರುದ್ಧ ಮಾತ್ರ. ಸಿದ್ದರಾಮಯ್ಯ, ದಿನೇಶ್ ವಿರುದ್ಧ ಹೋರಾಟ ಅಲ್ಲ,” ಎಂದು ಡಿಕೆ ಶಿವಕುಮಾರ್, ತಿಳಿಸಿದ್ದಾರೆ..
“ನಾನೇಕೆ ಸಿದ್ದರಾಮಯ್ಯ ವಿರುದ್ಧ ಮಾತನಾಡ್ಲಿ? ಗದ್ದುಗೆ ಏರೋಕೆ ನನಗೆ ಯಾವುದೇ ಆತುರ ಇಲ್ಲ. ನಾನು ಗಾಂಧಿ ಕುಟುಂಬಕ್ಕೆ ನಿಷ್ಠನಾಗಿದ್ದೇನೆ. ಅಧಿಕಾರ ಹುಡುಕಿಕೊಂಡು ಹೋಗುವ ಅಗತ್ಯ ಇಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಡಿಕೆಶಿ ಗೊತ್ತು. ಲಾಬಿ ಮಾಡಿ ಅಧಿಕಾರ ಪಡೆಯುವ ಅಗತ್ಯ ಇಲ್ಲ,” ಎನ್ನುವ ಮೂಲಕ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯತ್ನಿಸುತ್ತಿಲ್ಲ ಎಂಬುದನ್ನು ತಿಳಿಸಿದರು.
“ಹಣೆಬರಹದಲ್ಲಿ ಬರೆದಿದ್ರೆ ಬಂದೇ ಬರತ್ತೆ. ಲಕ್ಷ್ಮಣ ಸವದಿ ನೋಡಿ. ಶಾಸಕರಲ್ಲದೇ ಇದ್ದರೂ ಮಂತ್ರಿ ಆದರು. ಉಪಮುಖ್ಯಮಂತ್ರಿ ಕೂಡ ಆದರು. ಅವರ ಹಣೆಯಲ್ಲಿ ಬರೆದಿತ್ತು, ಅದಕ್ಕೆ ಆಗಿದ್ದಾರೆ,” ಎಂದರು.
“ಒಂದು ಕಾಲ ಇತ್ತು, ನಾವು ಮಾಡಿದ ಒಳ್ಳೆಯ ಮತ್ತು ಕೆಟ್ಟ ಕಾರ್ಯಗಳು ನಮ್ಮ ಮಕ್ಕಳು, ಮೊಮ್ಮಕ್ಕಳು ಅನುಭವಿಸುತ್ತಿದ್ದರು. ಆದ್ರೆ ಈಗ ನಾವು ಮಾಡಿದ್ದು ನಾವೇ ಅನುಭವಿಸಬೇಕು. ಈಗ ಕಾಲ ಎಲ್ಲವೂ ಬದಲಾಗಿದೆ. ಅವರಿಗಾಗಿ ಮಂತ್ರಿ ಸ್ಥಾನವನ್ನ ಇಟ್ಟುಕೊಂಡಿದ್ದಾರೆ. ಆದಷ್ಟು ಬೇಗ ಅವರೆಲ್ಲ ಮಂತ್ರಿಯಾಗಲಿ,” ಎಂದರು.
ಇಂದಿರಾ ಕ್ಯಾಂಟೀನ್ ವಿಚಾರದಲ್ಲಿ ಸರ್ಕಾರ ಅನುದಾನ ಕಡಿತ ಮಾಡಿದ್ರೆ 100 ಶಾಸಕರ ಪರವಾಗಿ ನಾನು ಹೋರಾಟ ಮಾಡ್ತೇನೆ,” ಎಂದರು.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…