ಬೆಂಗಳೂರು: “ನನ್ನ ಹೋರಾಟ ಬಿಜೆಪಿಯವರ ವಿರುದ್ಧ ಮಾತ್ರ. ಸಿದ್ದರಾಮಯ್ಯ, ದಿನೇಶ್ ವಿರುದ್ಧ ಹೋರಾಟ ಅಲ್ಲ,” ಎಂದು ಡಿಕೆ ಶಿವಕುಮಾರ್, ತಿಳಿಸಿದ್ದಾರೆ..
“ನಾನೇಕೆ ಸಿದ್ದರಾಮಯ್ಯ ವಿರುದ್ಧ ಮಾತನಾಡ್ಲಿ? ಗದ್ದುಗೆ ಏರೋಕೆ ನನಗೆ ಯಾವುದೇ ಆತುರ ಇಲ್ಲ. ನಾನು ಗಾಂಧಿ ಕುಟುಂಬಕ್ಕೆ ನಿಷ್ಠನಾಗಿದ್ದೇನೆ. ಅಧಿಕಾರ ಹುಡುಕಿಕೊಂಡು ಹೋಗುವ ಅಗತ್ಯ ಇಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಡಿಕೆಶಿ ಗೊತ್ತು. ಲಾಬಿ ಮಾಡಿ ಅಧಿಕಾರ ಪಡೆಯುವ ಅಗತ್ಯ ಇಲ್ಲ,” ಎನ್ನುವ ಮೂಲಕ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯತ್ನಿಸುತ್ತಿಲ್ಲ ಎಂಬುದನ್ನು ತಿಳಿಸಿದರು.
“ಹಣೆಬರಹದಲ್ಲಿ ಬರೆದಿದ್ರೆ ಬಂದೇ ಬರತ್ತೆ. ಲಕ್ಷ್ಮಣ ಸವದಿ ನೋಡಿ. ಶಾಸಕರಲ್ಲದೇ ಇದ್ದರೂ ಮಂತ್ರಿ ಆದರು. ಉಪಮುಖ್ಯಮಂತ್ರಿ ಕೂಡ ಆದರು. ಅವರ ಹಣೆಯಲ್ಲಿ ಬರೆದಿತ್ತು, ಅದಕ್ಕೆ ಆಗಿದ್ದಾರೆ,” ಎಂದರು.
“ಒಂದು ಕಾಲ ಇತ್ತು, ನಾವು ಮಾಡಿದ ಒಳ್ಳೆಯ ಮತ್ತು ಕೆಟ್ಟ ಕಾರ್ಯಗಳು ನಮ್ಮ ಮಕ್ಕಳು, ಮೊಮ್ಮಕ್ಕಳು ಅನುಭವಿಸುತ್ತಿದ್ದರು. ಆದ್ರೆ ಈಗ ನಾವು ಮಾಡಿದ್ದು ನಾವೇ ಅನುಭವಿಸಬೇಕು. ಈಗ ಕಾಲ ಎಲ್ಲವೂ ಬದಲಾಗಿದೆ. ಅವರಿಗಾಗಿ ಮಂತ್ರಿ ಸ್ಥಾನವನ್ನ ಇಟ್ಟುಕೊಂಡಿದ್ದಾರೆ. ಆದಷ್ಟು ಬೇಗ ಅವರೆಲ್ಲ ಮಂತ್ರಿಯಾಗಲಿ,” ಎಂದರು.
ಇಂದಿರಾ ಕ್ಯಾಂಟೀನ್ ವಿಚಾರದಲ್ಲಿ ಸರ್ಕಾರ ಅನುದಾನ ಕಡಿತ ಮಾಡಿದ್ರೆ 100 ಶಾಸಕರ ಪರವಾಗಿ ನಾನು ಹೋರಾಟ ಮಾಡ್ತೇನೆ,” ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…