Featured

ನಾನು ಗ್ಲಿಸರಿನ್‌‌ ಹಚ್ಚಿ ಅಥವಾ ಯಾವುದೇ ನಾಟಕೀಯವಾಗಿ ಕಣ್ಣೀರು ಹಾಕಿಲ್ಲ, ಜನರ ಸಂಕಷ್ಟವನ್ನು ಭಾವನಾತ್ಮಕವಾಗಿ ನೋಡಿದಾಗ ಕಣ್ಣೀರು ಬರುತ್ತದೆ : ಹೆಚ್‌ ಡಿ ಕುಮಾರಸ್ವಾಮಿ – Vishwanews24

ಇನ್ನು ಮುಂದೆ ನಾನು ಕಣ್ಣೀರು ಹಾಕುವುದಿಲ್ಲ ಎಂದು ತೀರ್ಮಾನಿಸಿದ್ದೇನೆ..

ಹಾಗೆಂದು ನಾನು ಕಟುಕ ಹೃದಯದವನು ಎಂದು ಭಾವಿಸಬೇಡಿ..

ಜನರ ಕಷ್ಟವನ್ನು ನೋಡಿದಾಗ ನನ್ನ ಹೃದಯ ಮಿಡಿಯುತ್ತದೆ..

ಮಂಡ್ಯ: “ಇನ್ನು ಮುಂದೆ ನಾನು ಕಣ್ಣೀರು ಹಾಕುವುದಿಲ್ಲ” ಎಂದು ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಶಪಥ ಹಾಕಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇನ್ನು ಮುಂದೆ ನಾನು ಕಣ್ಣೀರು ಹಾಕುವುದಿಲ್ಲ ಎಂದು ತೀರ್ಮಾನಿಸಿದ್ದೇನೆ. ಹಾಗೆಂದು ನಾನು ಕಟುಕ ಹೃದಯದವನು ಎಂದು ಭಾವಿಸಬೇಡಿ. ಜನರ ಕಷ್ಟವನ್ನು ನೋಡಿದಾಗ ನನ್ನ ಹೃದಯ ಮಿಡಿಯುತ್ತದೆ” ಎಂದಿದ್ದಾರೆ.

“ನಾನು ಸಿಎಂ ಆಗಿದ್ದ ಸಂದರ್ಭ ಕನಗನಮರಡಿ ಬಸ್‌ ದುರಂತ ಸಂಭವಿಸಿತ್ತು. ಆಗ ಅನೇಕರು ಮೃತಪಟ್ಟಿದ್ದರು. ಆ ದೃಶ್ಯವನ್ನು ಕಂಡು ನೋವಿನಿಂದ ಕಣ್ಣೀರಿಟ್ಟಿದ್ದೆ. ಆದರೆ, ಕೆಲವರು ಅದನ್ನೇ ಟವೆಲ್‌‌ನಲ್ಲಿ ಗ್ಲಿಸರಿನ್‌ ಹಚ್ಚಿ ಅಳುತ್ತಿದ್ದಾರೆ ಎಂದು ಹೇಳಿದ್ದರು” ಎಂದು ತಿಳಿಸಿದ್ದಾರೆ.

“ನಾನು ಗ್ಲಿಸರಿನ್‌‌ ಹಚ್ಚಿ ಅಥವಾ ಯಾವುದೇ ನಾಟಕೀಯವಾಗಿ ಕಣ್ಣೀರು ಹಾಕಿಲ್ಲ. ಜನರ ಸಂಕಷ್ಟವನ್ನು ಭಾವನಾತ್ಮಕವಾಗಿ ನೋಡಿದಾಗ ಕಣ್ಣೀರು ಬರುತ್ತದೆ” ಎಂದಿದ್ದಾರೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

4 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

4 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

4 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

5 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

6 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

6 hours ago