ಮಂಡ್ಯ: “ಇನ್ನು ಮುಂದೆ ನಾನು ಕಣ್ಣೀರು ಹಾಕುವುದಿಲ್ಲ” ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಶಪಥ ಹಾಕಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇನ್ನು ಮುಂದೆ ನಾನು ಕಣ್ಣೀರು ಹಾಕುವುದಿಲ್ಲ ಎಂದು ತೀರ್ಮಾನಿಸಿದ್ದೇನೆ. ಹಾಗೆಂದು ನಾನು ಕಟುಕ ಹೃದಯದವನು ಎಂದು ಭಾವಿಸಬೇಡಿ. ಜನರ ಕಷ್ಟವನ್ನು ನೋಡಿದಾಗ ನನ್ನ ಹೃದಯ ಮಿಡಿಯುತ್ತದೆ” ಎಂದಿದ್ದಾರೆ.
“ನಾನು ಸಿಎಂ ಆಗಿದ್ದ ಸಂದರ್ಭ ಕನಗನಮರಡಿ ಬಸ್ ದುರಂತ ಸಂಭವಿಸಿತ್ತು. ಆಗ ಅನೇಕರು ಮೃತಪಟ್ಟಿದ್ದರು. ಆ ದೃಶ್ಯವನ್ನು ಕಂಡು ನೋವಿನಿಂದ ಕಣ್ಣೀರಿಟ್ಟಿದ್ದೆ. ಆದರೆ, ಕೆಲವರು ಅದನ್ನೇ ಟವೆಲ್ನಲ್ಲಿ ಗ್ಲಿಸರಿನ್ ಹಚ್ಚಿ ಅಳುತ್ತಿದ್ದಾರೆ ಎಂದು ಹೇಳಿದ್ದರು” ಎಂದು ತಿಳಿಸಿದ್ದಾರೆ.
“ನಾನು ಗ್ಲಿಸರಿನ್ ಹಚ್ಚಿ ಅಥವಾ ಯಾವುದೇ ನಾಟಕೀಯವಾಗಿ ಕಣ್ಣೀರು ಹಾಕಿಲ್ಲ. ಜನರ ಸಂಕಷ್ಟವನ್ನು ಭಾವನಾತ್ಮಕವಾಗಿ ನೋಡಿದಾಗ ಕಣ್ಣೀರು ಬರುತ್ತದೆ” ಎಂದಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…