Featured

ನಾನು ಜನ್ಮತಃ ಹಿಂದುವಾಗಿದ್ದು, ಹಿಂದುವಾಗಿಯೇ ಜೀವಿಸಿ, ಹಿಂದುವಾಗಿಯೇ ಸಾಯುತ್ತೇನೆ : ಡಿ.ಕೆ.ಶಿ – vishwanews24

ನಾನು ಹುಟ್ಟು ಕಾಂಗ್ರೆಸಿಗ,  ನಾನು ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂಬುದೆಲ್ಲ ಸುಳ್ಳು : ಡಿ.ಕೆ.ಶಿ

ಬೆಂಗಳೂರು : ನಾನು ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂಬುದೆಲ್ಲ ಸುಳ್ಳು. ಅದೆಲ್ಲವೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆಯಷ್ಟೇ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾನು ಹುಟ್ಟಾ ಕಾಂಗ್ರೆಸಿಗ. ಆದರೂ, ನನ್ನ ವೈಯಕ್ತಿಕ ನಂಬಿಕೆ ನಾನು ಪಾಲಿಸುತ್ತೇನೆ. ನಾನು ಎಲ್ಲ ಧರ್ಮವನ್ನೂ ಪ್ರೀತಿಸುತ್ತೇನೆ ಮತ್ತು ಗೌರವಿಸುತ್ತೇನೆ. ನಾನು ಜನ್ಮತಃ ಹಿಂದುವಾಗಿದ್ದು, ಹಿಂದುವಾಗಿಯೇ ಜೀವಿಸಿ, ಹಿಂದುವಾಗಿಯೇ ಸಾಯುತ್ತೇನೆ ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಇಶಾ ಫೌಂಡೇಷನ್‌ನ ಸದ್ಗುರು ಜಗ್ಗಿ ವಾಸುದೇವ ಅವರು ಶಿವರಾತ್ರಿ ಕಾರ್ಯಕ್ರಮಕ್ಕೆ ಆಹ್ವಾನಿಸಲು ಭೇಟಿಯಾಗಿದ್ದರು. ಅದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೂ ಪಾಲ್ಗೊಳ್ಳುತ್ತಿದ್ದಾರೆ. ಹಾಗೆಯೇ ನಾನು ಇತ್ತೀಚೆಗೆ ಮಹಾಕುಂಭ ಮೇಳದಲ್ಲಿ ಪಾಲ್ಗೊಂಡಿದ್ದೆ. ಈ ಎಲ್ಲ ಕಾರಣದಿಂದಾಗಿ ನಾನು ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂಬುದೆಲ್ಲ ಸುಳ್ಳು ಎಂದು ಹೇಳಿದರು.

ದೆಹಲಿ ಪ್ರವಾಸದ ವೇಳೆ ಎಐಸಿಸಿ ಕಚೇರಿ ಭೇಟಿ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಕೆಪಿಸಿಸಿ ಅಧ್ಯಕ್ಷ. ಎಐಸಿಸಿ ಕಚೇರಿ ನನಗೆ ದೇವಸ್ಥಾನವಿದ್ದಂತೆ. ಯಾವುದೇ ನಾಯಕರನ್ನೂ ಭೇಟಿ ಮಾಡದಿದ್ದರೂ ಎಐಸಿಸಿ ಕಚೇರಿಗೆ ಹೋಗಿ ಬರುತ್ತೇನೆ. ಆ ಕಚೇರಿಯೇ ನನ್ನನ್ನು ಈ ಸ್ಥಾನದಲ್ಲಿ ಕೂರಿಸಿದೆ. ನಾನು ಕಾಂಗ್ರೆಸ್‌ ಕಚೇರಿಗೆ ಹೋಗದೆ ಬಿಜೆಪಿ ಕಚೇರಿಗೆ, ಕೇಶವ ಕೃಪಕ್ಕೆ ಹೋಗಲು ಸಾಧ್ಯವೇ? ಎಂದರು.

 

Vishwa News 24

Recent Posts

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ – vishwanews24

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…

12 minutes ago

ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ – vishwanews24

ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ ಸುಳ್ಯ : ಕೌಟುಂಬಿಕ…

19 minutes ago

ಮೂಡುಬಿದಿರೆ:  ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ.ಕೆ ಭಟ್ ನಿಧನ – vishwanews24

ಮೂಡುಬಿದಿರೆ:  ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ ಕೆ ಭಟ್ ನಿಧನ ಮೂಡುಬಿದಿರೆ: ಪೇಟೆಯ ರತನ್…

32 minutes ago

ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ  ; ಪ್ರಮುಖ ಆರೋಪಿಯ ಬಂಧನ – vishwanews24

ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ  ; ಪ್ರಮುಖ ಆರೋಪಿಯ ಬಂಧನ ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ…

39 minutes ago

ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ – vishwanews24

ಧರ್ಮಸ್ಥಳ ಸೌಜನ್ಯ ಕೊಲೆ ಕೇಸ್ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ ಬೆಳ್ತಂಗಡಿ: ದೇಶದ ಗಮನ…

47 minutes ago

ಉಡುಪಿ : ಅಕ್ಕಕೆಫೆ ನಿರ್ವಹಣೆ – ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ – vishwanews24

 ಉಡುಪಿ : ಅಕ್ಕಕೆಫೆ ನಿರ್ವಹಣೆ - ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ      ಉಡುಪಿ : ರಾಷ್ಟ್ರೀಯ ಗ್ರಾಮೀಣ…

2 hours ago