ಬೆಂಗಳೂರು :ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮೊದಲ ಬಾರಿಗೆ ಚುನಾವಣೆಯಲ್ಲಿ ಸೋತ ಕುರಿತಾದಂತೆ ತಮ್ಮ ಸಮುದಾಯದ ವೇದಿಕೆಯಲ್ಲಿ ಮಾತನಾಡಿದರು. “ನಾನು ಜಾತಿಗಳ ನಡುವೆ ವಿಷಬೀಜ ಬಿತ್ತುತ್ತಿದ್ದೇನೆ, ಜಾತಿಗಳನ್ನು ಒಡೆಯುತತಿದ್ದೇನೆ ಎಂದು ಅಪಪ್ರಚಾರ ಮಾಡಿದರು. ಕೊನೆಗೆ ನಮ್ಮನ್ನು ಸೋಲಿಸಿಯೇ ಬಿಟ್ಟರು. ಇನ್ನು ಸಾಮಾಜಿಕ ನ್ಯಾಯದಿಂದ ವಂಚಿತರಾದ ಯಾರು ಕೂಡಾ ನಮ್ಮ ಪರವಾಗಿ ಧ್ವನಿಯೆತ್ತಲಿಲ್ಲ ಎಂದು ಸಿದ್ದರಾಮಯ್ಯ ನೋವು ತೋಡಿಕೊಂಡರು.
ಅರಮನೆ ಮೈದಾನದಲ್ಲಿ ಭಾನುವಾರ ಕರ್ನಾಟಕ ಪ್ರದೇಶ ಕುರುಬರ ಸಂಘ ಹಮ್ಮಿಕೊಂಡಿದ್ದ “ಪ್ರತಿಭಾ ಪುರಸ್ಕಾರ’ದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಜ್ಯದ ನಾಲ್ಕು ಕೋಟಿ ಜನರಿಗೆ ಅನ್ನಭಾಗ್ಯ, ಲಕ್ಷಾಂತರ ವಿದ್ಯಾರ್ಥಿಗಳಿಗೆ ವಾರದ ಐದು ದಿನಗಳು ಕ್ಷೀರಭಾಗ್ಯ, ಕೃಷಿಭಾಗ್ಯದಡಿ ಕೃಷಿ ಹೊಂಡಗಳ ನಿರ್ಮಾಣ, ಎಲ್ಲ ಹಿಂದುಳಿದ ಜಾತಿಗಳ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ, ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ ಸೇರಿದಂತೆ ಅನೇಕ ಯೋಜನೆಗಳನ್ನು ನನ್ನ ಅಧಿಕಾರಾವಧಿಯಲ್ಲಿ ಜಾರಿಗೊಳಿಸಿದ್ದೇನೆ. ಇವೆಲ್ಲವೂ ಎಲ್ಲ ಜಾತಿಗಳಿಗೂ ಅನ್ವಯ ಆಗುವುದಿಲ್ಲವೇ ಎಂದು ಪ್ರಶ್ನಿಸಿದ ಅವರು, ಸಾಮಾಜಿಕನ್ಯಾಯದಡಿ ಇಷ್ಟೆಲ್ಲಾ ಯೋಜನೆಗಳನ್ನು ಘೋಷಿದ್ದರೂ ಆ ಜಾತಿ ವಿರೋಧಿ, ಈ ಜಾತಿ ವಿರೋಧಿಯಾಗಿ ಜಾತಿಗಳನ್ನು ಒಡೆಯುತ್ತೇನೆ ಎಂದು ಅಪಪ್ರಚಾರ ಮಾಡಿ ಸೋಲಿಸಿಬಿಟ್ಟರು. ಸಾಮಾಜಿಕ ನ್ಯಾಯದಿಂದ ಈವರೆಗೆ ವಂಚಿತರಾದವರು ಚುನಾವಣೆಯಲ್ಲಿ ಟೀಕಾಕಾರರಿಗೆ ತಿರುಗೇಟು ನೀಡಬೇಕಾಗಿತ್ತು. ಅವರು ಕೂಡ ಮೌನ ವಹಿಸಿದರು ಎಂದು ಬೇಸರ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…