ಮಂಗಳೂರು: ನಾನು ಜೆಡಿಎಸ್ ನಲ್ಲೇ ಇದ್ದೇನೆ, ಬಿಜೆಪಿಗೂ ಬೆಂಬಲ ನೀಡುತ್ತೇನೆ. ಆದರೆ ಬಿಜೆಪಿಯ ಎಲ್ಲ ಸಿದ್ಧಾಂತಗಳ ಬಗ್ಗೆ ನನಗೆ ಸಹಮತವಿಲ್ಲ ಎಂದು ಮಾಜಿ ಶಾಸಕ ಮೊಯ್ದಿನ್ ಬಾವ ಹೇಳಿದ್ದಾರೆ.
ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ನಾನು ಸ್ಪರ್ಧೆಗಿಳಿಯುವ ನಿಟ್ಟಿನಲ್ಲಿ ನನ್ನ ಬೆಂಬಲಿಗರು ಇಚ್ಛೆ ವ್ಯಕ್ತಪಡಿಸಿದ್ದಾರೆ. ನಾನು ಯಾವುದೇ ನಿರ್ಧಾರ ಇನ್ನೂ ಮಾಡಿಲ್ಲ. ಮಾ.28ರಂದು ನಗರದ ಕಂಕನಾಡಿಯ ಜಮೀಯ್ಯತುಲ್ ಫಲಾಹ್ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಲಾಗಿರುವ ಸಭೆಯಲ್ಲಿ ಬೆಂಬಲಿಗರ ಜತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಿದ್ದೇನೆ ಎಂದವರು ಹೇಳಿದರು.
ಜೆಡಿಎಸ್ ಪಕ್ಷ ತೊರೆದಿರುವಿರಾ ಎಂಬ ಪ್ರಶ್ನೆಗೆ, ನಾನು ಜೆಡಿಎಸ್ ನಲ್ಲೇ ಇದ್ದೇನೆ. ಜೆಡಿಎಸ್ ಪಕ್ಷ ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡಿದೆ. ಹಾಗಾಗಿ ಬಿಜೆಪಿಯನ್ನು ಬೆಂಬಲಿಸುತ್ತೇನೆ. ಆದರೆ ಬಿಜೆಪಿಯ ಎಲ್ಲಾ ಸಿದ್ಧಾಂತಗಳಿಗೆ ಸಹಮತ ಇಲ್ಲ. ಸಿಎಎ, ಹಿಜಾಬ್, ಆಝಾನ್ ಗೆ ವಿರೋಧದ ಬಿಜೆಪಿಯ ಸಿದ್ಧಾಂತಗಳನ್ನು ನಾನು ವಿರೋಧಿಸುತ್ತೇನೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕಲ್ಲಡ್ಕ ಶಾಲೆಗೆ ಭೇಟಿಯನ್ನು ನಾನು ವಿರೋಧಿಸಿದ್ದೆ ಎಂದವರು ಹೇಳಿದರು.
ಕಾಂಗ್ರೆಸ್ ನಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ತಪ್ಪಲು ಪಕ್ಷದ ರಾಜ್ಯಾಧ್ಯಕ್ಷರೇ ಕಾರಣ ಎಂದು ದೂರಿದ ಮೊಯ್ದಿನ್ ಬಾವ, ಶಾಸಕರೇ ಆಗಿದ್ದ ಬಿಜೆಪಿಯ ಜಗದೀಶ್ ಶೆಟ್ಟರ್ ಅವರನ್ನು ಹೆಲಿಕಾಪ್ಟರ್ಗಳ ಮೂಲಕ ಬರ ಮಾಡಿಕೊಂಡಿದ್ದ ಕಾಂಗ್ರೆಸ್, ಅದೇ ಸಂದರ್ಭದಲ್ಲಿ ನಾನು ಉಪವಾಸವಿದ್ದರೂ ಟಿಕೆಟ್ ಬಯಸಿ ಪಕ್ಷದ ನಾಯಕರನ್ನು ಕಾಯುತ್ತಿದ್ದರೂ ನನ್ನನ್ನು ಕರೆದು ಮಾತನಾಡುವ ಸೌರ್ಜನ್ಯ ತೋರಿಸಲಿಲ್ಲ. ಹಾಗಾಗಿ ನಾನು ಪಕ್ಷ ತೊರೆದು ಜೆಡಿಎಸ್ ಸೇರುವ ಅನಿರ್ವಾಯತೆ ಎದುರಾಯಿತು. ಆ ಸಂದರ್ಭ ನಾನು ಜೆಡಿಎಸ್ನಿಂದ ಸ್ಪರ್ಧಿಸಲು ಮುಂದಾದೆ. ನನ್ನ ಬೆಂಬಲಿಗರು ಪಕ್ಷೇತರನಾಗಿ ಸ್ಪರ್ಧಿಸುವಂತೆ ಒತ್ತಾಯಿಸಿದ್ದರು. ಆದರೆ ನಾನು ಆ ಸಂದರ್ಭ ತಪ್ಪು ಮಾಡಿದ್ದೆ. ಈ ಬಾರಿ ಬೆಂಬಲಿಗರ ಸಲಹೆಯಂತೆ ಮುಂದುವರಿಯಲಿದ್ದೇನೆ ಎಂದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…