ಮಂಡ್ಯ: ಈ ಬಾರಿ ಲೋಕಸಭೆಗೆ ನನ್ನ ಸ್ಪರ್ಧೆ ಖಚಿತ ಎಂದು ಹಾಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು, ಮಂಡ್ಯ ಕ್ಷೇತ್ರ ಅಭ್ಯರ್ಥಿಯ ಬಗ್ಗೆ ಅಂತೆ ಕಂತೆ ಮೊದಲಿನಿಂದಲೂ ಇದೆ. ಅಧಿಕೃತ ನಿರ್ಧಾರ ಬರೋವರೆಗೂ ಕಾಯೋಣ. ಮಂಡ್ಯ ಬಿಜೆಪಿಗೆ ಸಿಗಲಿದೆ ಎಂಬ ವಿಶ್ವಾಸ ನನಗಿದೆ. ನಾನು ನನ್ನ ಟಿಕೆಟ್ಗಾಗಿ ಹೋರಾಟ ಮಾಡುತ್ತಿಲ್ಲ. ನನ್ನ ಹೋರಾಟ ಮಂಡ್ಯಕ್ಕೋಸ್ಕರ, ಮಂಡ್ಯದಲ್ಲಿ ಬಿಜೆಪಿ ಸಂಘಟಿಸಲು ನನ್ನ ಹೋರಾಟ ಇದೆ ಎಂದರು.
ಈ ವೇಳೆ ಮಂಡ್ಯದಿಂದ ಸ್ಪರ್ಧೆ ಮಾಡುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ನಕ್ಕು ಉತ್ತರ ನೀಡದೇ ಸುಮಲತಾ ಹೊರಟರು. ಈ ಮೂಲಕ ಇನ್ನಷ್ಟು ಕುತೂಹಲವನ್ನು ಸುಮಲತಾ ಮೂಡಿಸಿದ್ದಾರೆ.
ನನಗೆ ಟಿಕೆಟ್ ಪಡೆಯುವ ಉದ್ದೇಶ ಇದ್ದಿದ್ದರೆ ಎಲ್ಲಾದರೂ ಅವಕಾಶ ಸಿಗುತ್ತಿತ್ತು. ಜೆಡಿಎಸ್ ನಾಯಕರು ಏನಾದರೂ ಹೇಳಬಹುದು. ಅಂತಿಮ ಘೋಷಣೆ ಆಗುವವರೆಗೂ ಮಾತನಾಡುವುದು ಸೂಕ್ತವಲ್ಲ. ಆದರೆ ಈ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ ಎಂದರು.
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…