ಮಂಡ್ಯ: ಈ ಬಾರಿ ಲೋಕಸಭೆಗೆ ನನ್ನ ಸ್ಪರ್ಧೆ ಖಚಿತ ಎಂದು ಹಾಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು, ಮಂಡ್ಯ ಕ್ಷೇತ್ರ ಅಭ್ಯರ್ಥಿಯ ಬಗ್ಗೆ ಅಂತೆ ಕಂತೆ ಮೊದಲಿನಿಂದಲೂ ಇದೆ. ಅಧಿಕೃತ ನಿರ್ಧಾರ ಬರೋವರೆಗೂ ಕಾಯೋಣ. ಮಂಡ್ಯ ಬಿಜೆಪಿಗೆ ಸಿಗಲಿದೆ ಎಂಬ ವಿಶ್ವಾಸ ನನಗಿದೆ. ನಾನು ನನ್ನ ಟಿಕೆಟ್ಗಾಗಿ ಹೋರಾಟ ಮಾಡುತ್ತಿಲ್ಲ. ನನ್ನ ಹೋರಾಟ ಮಂಡ್ಯಕ್ಕೋಸ್ಕರ, ಮಂಡ್ಯದಲ್ಲಿ ಬಿಜೆಪಿ ಸಂಘಟಿಸಲು ನನ್ನ ಹೋರಾಟ ಇದೆ ಎಂದರು.
ಈ ವೇಳೆ ಮಂಡ್ಯದಿಂದ ಸ್ಪರ್ಧೆ ಮಾಡುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ನಕ್ಕು ಉತ್ತರ ನೀಡದೇ ಸುಮಲತಾ ಹೊರಟರು. ಈ ಮೂಲಕ ಇನ್ನಷ್ಟು ಕುತೂಹಲವನ್ನು ಸುಮಲತಾ ಮೂಡಿಸಿದ್ದಾರೆ.
ನನಗೆ ಟಿಕೆಟ್ ಪಡೆಯುವ ಉದ್ದೇಶ ಇದ್ದಿದ್ದರೆ ಎಲ್ಲಾದರೂ ಅವಕಾಶ ಸಿಗುತ್ತಿತ್ತು. ಜೆಡಿಎಸ್ ನಾಯಕರು ಏನಾದರೂ ಹೇಳಬಹುದು. ಅಂತಿಮ ಘೋಷಣೆ ಆಗುವವರೆಗೂ ಮಾತನಾಡುವುದು ಸೂಕ್ತವಲ್ಲ. ಆದರೆ ಈ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ ಎಂದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…