ಕನ್ನಡ ಭಾಷೆಯ ಬಗ್ಗೆ ಕಮಲ್ ಹಾಸನ್ ನೀಡಿರುವ ಹೇಳಿಕೆಗೆ ಕರ್ನಾಟಕದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಕ್ಷಮೆ ಕೋರಲು ಗಡುವು ನೀಡಿದ್ದ ಕರ್ನಾಟಕಕ್ಕೆ ಕ್ಷಮೆ ಕೇಳಲ್ಲ, ನಾನು ತಪ್ಪು ಮಾಡಿಲ್ಲ ಎಂದು ಕಮಲ್ ಹಾಸನ್ ಮತ್ತೆ ಉದ್ಧಟತನ ತೋರಿದ್ದಾರೆ.
ಇಂದು (ಮೇ 30) ಚೆನ್ನೈನಲ್ಲಿ ನಡೆದ ‘ಥಗ್ ಲೈಫ್’ ಸುದ್ದಿಗೋಷ್ಠಿಯಲ್ಲಿ ಕಮಲ್ ಹಾಸನ್ ಮಾತನಾಡಿ, ಇದು ಪ್ರಜಾಪ್ರಭುತ್ವ. ನಾನು ಕಾನೂನು ಮತ್ತು ನ್ಯಾಯವನ್ನು ನಂಬುತ್ತೇನೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ಕೇರಳದ ಮೇಲಿನ ನನ್ನ ಪ್ರೀತಿ ನಿಜ. ನಾನು ತಪ್ಪು ಮಾಡಿಲ್ಲ, ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ನನ್ನಿಂದ ತಪ್ಪಾಗಿದ್ರೆ ಕ್ಷಮೆ ಕೇಳುವೆ, ನನ್ನಿಂದ ತಪ್ಪು ಆಗಿಲ್ಲ. ನನ್ನ ನಿರ್ಧಾರಕ್ಕೆ ಬದ್ಧವಾಗಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಯಾವುದೇ ಬೆದರಿಕೆ, ಎಚ್ಚರಿಕೆಗೆ ನಾನು ಹೆದರುವುದಿಲ್ಲ. ಕಾನೂನು ಹಾಗೂ ನ್ಯಾಯದ ಮೇಲೆ ನಂಬಿಕೆ ಇಟ್ಟಿದ್ದೇನೆ ಎಂದು ಹೇಳಿದ್ದಾರೆ.
ತಮಿಳು ಭಾಷೆಯಿಂದ ಕನ್ನಡ ಹುಟ್ಟಿದ್ದು ಎಂಬ ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ತಮ್ಮ ನಟನೆಯ ‘ಥಗ್ ಲೈಫ್’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಕನ್ನಡದ ಹಿರಿಯ ನಟ ಶಿವರಾಜ್ಕುಮಾರ್ ಅವರ ಎದುರೇ ಕಮಲ್ ಹಾಸನ್ ಈ ಹೇಳಿಕೆ ನೀಡಿದ್ದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.
ಕಮಲ್ ಹಾಸನ್ ಹೇಳಿಕೆ ಶುದ್ಧ ಸುಳ್ಳು. ಭಾಷಾ ಪ್ರಾವಿಣ್ಯತೆ ಇಲ್ಲದೇ ಈ ರೀತಿಯ ಉದ್ಧಟತನದ ಹೇಳಿಕೆ ನೀಡುವುದು ಸರಿಯಲ್ಲ ಎಂದು ಭಾಷಾ ವಿಜ್ಞಾನಿಗಳು ಖಂಡಿಸಿದ್ದಾರೆ. ನಟನ ಹೇಳಿಕೆಗೆ ಕನ್ನಡಪರ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಕೂಡಲೇ ಕನ್ನಡಿಗರ ಕ್ಷಮೆಯಾಚಿಸಿ, ಇಲ್ಲದಿದ್ದರೆ ನಿಮ್ಮ ಸಿನಿಮಾವನ್ನು ಕರ್ನಾಟಕದಲ್ಲಿ ಬ್ಯಾನ್ ಮಾಡಲಾಗುವುದು ಎಂದು ಹೋರಾಟಗಾರರು ನಟನಿಗೆ ಎಚ್ಚರಿಕೆ ನೀಡಿದ್ದಾರೆ.
ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್ನ ಚಿರಾಗ್ ನಗರದ ಗೌಸಿಯಾ ಚಾಲ್ನಲ್ಲಿ ಬುಧವಾರ…
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…