ಬೆಂಗಳೂರು: ಇಡಿ ಸಮನ್ಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಡಿ.ಕೆ ಶಿವಕುಮಾರ್ , ನಿಮ್ಮೆಲ್ಲರಿಗೂ ಅಭಿನಂದನೆಗಳು. ಆಗಸ್ಟ್ 2 2017ರಿಂದ ನನ್ನ ಬಗ್ಗೆ ವಿವಿಧ ರೀತಿಯಲ್ಲಿ ನೀವೆಲ್ಲಾ ವ್ಯಾಖ್ಯಾನ ಮಾಡಿದ್ದೀರಿ. ಪ್ರ, ಕೆಲವರು ಇರೋ ವಿಚಾರವನ್ನ ತಿರುಚಿ ತಮ್ಮದೆಯಾದ ರೀತಿಯಲ್ಲಿ ಕಲ್ಪನೆ ಮಾಡಿಕೊಂಡಿದ್ದೀರಿ. ನಿಮ್ಮ ಅನುಕೂಲಕ್ಕೆ ಯಾವ ರೀತಿ ಬಿಂಬಿಸಬೇಕೋ ಹಾಗೆ ಬಿಂಬಿಸಿದ್ದೀರಿ ಎಂದರು.
ಪಕ್ಷದ ನಿಷ್ಠಾವಂತ ಸೈನಿಕನ ರೀತಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ಗುಜರಾತ್, ಮಹಾರಾಷ್ಟ್ರ ಹಾಗೂ ನಮ್ಮ ಶಾಸಕರನ್ನು ಕಾಪಾಡುವ ಜವಾಬ್ದಾರಿ ನಿಭಾಯಿಸಿಕೊಂಡು ಬಂದಿದ್ದೇನೆ. ಕಳೆದ 40 ವರ್ಷದಿಂದ ನನ್ನದೆ ರೀತಿಯಲ್ಲಿ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಕೆಲವೊಮ್ಮೆ ಟೀಕೆ ಮಾಡಿರಬಹುದು, ಕೆಲವೊಮ್ಮೆ ಸಹಾಯ ಮಾಡಿರಬಹುದು. ನನ್ನ ಹೋರಾಟದಲ್ಲಿ ಕೆಲವರು ಸಂತೋಷ ಪಟ್ಟಿರಬಹುದು, ಕೆಲವರು ದು:ಖ ಪಟ್ಟಿರಬಹುದು. ಪಕ್ಷಕ್ಕಾಗಿ ನಿರಂತರವಾಗಿ ಪ್ರಾಮಾಣಿಕೆಯಿಂದ ಕೆಲಸ ಮಾಡಿಕೊಂಡು ಬಂದಿದ್ದೇನೆ. ಆದರೆ ಈಗ ನನ್ನ ಮೇಲೆ, ನನ್ನ ಕುಟುಂಬ ಹಾಗೂ ಸ್ನೇಹಿತರ ಮೇಲೆ ಇಡಿ ದಾಳಿ ನಡೆಸಿದೆ. ಈ ಬಗ್ಗೆ ನಾನು ನಮ್ಮ ಶಾಸಕರ ಜೊತೆ ರೆಸಾರ್ಟಿನಲ್ಲಿದ್ದಾಗ ನೀವು ತೋರಿಸಿದ್ದೀರಿ ಎಂದು ತಿಳಿಸಿದರು.
ಇದನ್ನು ಕಾನೂನು ಚೌಕಟ್ಟಿನಲ್ಲೂ ಎದುರಿಸಬೇಕಾಗುತ್ತೆದೆ, ರಾಜಕೀಯವಾಗಿಯೂ ಎದುರಿಸ ಬೇಕಾಗುತ್ತದೆ. ನಾನು ತಪ್ಪು ಮಾಡಿಲ್ಲ, ಕೊಲೆ ಮಾಡಿಲ್ಲ, ಮೋಸ ಮಾಡಿಲ್ಲ. ನ್ಯಾಯಯುತವಾಗಿ ದುಡಿದಿದ್ದೇನೆ, ಬದುಕಿದ್ದೇನೆ. ಷಡ್ಯಂತ್ರಗಳನ್ನು ಮಾಡಿ ಈ ಪ್ರಕರಣದಲ್ಲಿ ಸಿಲುಕಿಸಿದ್ದಾರೆ. ನ್ಯಾಯಯುತವಾಗಿ ಹೋರಾಡುತ್ತೇನೆ ಎಂದು ಹೇಳಿದರು.
ನಾನು ಹೆದರಿಕೊಂಡು ಹೋಗುವ ಕೆಂಪೇಗೌಡನ ಮಗನಲ್ಲ. ನಾನು ಕಾನೂನಾಗಿ, ರಾಜಕೀಯವಾಗಿ ಹಾಗೂ ಸಾಮಾಜಿಕವಾಗಿ ಎದುರಿಸುತ್ತೇನೆ. ನಮ್ಮ ಮನೆಗಳಲ್ಲಿ ಸಿಕ್ಕ ಹಣದ ಬಗ್ಗೆ ನಾವು ಸಾಕ್ಷಿ ಕೊಡುತ್ತೇವೆ. ಆದರೆ ಬಿಜೆಪಿ ಆಪರೇಷನ್ ಮಾಡಿದಾಗ ಕೋಟಿಗಟ್ಟಲೆ ಹಣದ ವ್ಯವಹಾರ ಮಾಡಿರುವ ಬಗ್ಗೆ ಯಾಕೆ ಯಾರು ಪ್ರಶ್ನಿಸಿಲ್ಲ. ಅವರಿಗೆ ಯಾಕೆ ನೋಟಿಸ್ ಕೊಟ್ಟಿಲ್ಲ. ಸದನದಲ್ಲಿ ಬಹಿರಂಗವಾಗಿಯೇ ಬಿಜೆಪಿ ಕೋಟಿಗಟ್ಟಲೇ ಹಣದ ಆಮಿಷ ಒಡ್ಡಿರುವ ಬಗ್ಗೆ ನಮ್ಮ ನಾಯಕರು ಹೇಳಿದ್ದಾರೆ. ಆದರೂ ಬಿಜೆಪಿ ಮೇಲೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಒಬ್ಬರಿಗೆ ಒಂದು ನ್ಯಾಯ, ಇನ್ನೊಬ್ಬರಿಗೆ ಒಂದು ನ್ಯಾಯ ಅಂದರೆ ಹೇಗೆ? ನಾನು ಯಾವುದಕ್ಕೂ ಹೆದರಲ್ಲ. ನಾನು ತಪ್ಪು ಮಾಡಿಲ್ಲ. ಇಡಿ ನೊಟಿಸ್ಗೆ ಗೌರವಿಸುತ್ತೇನೆ, ಅದಕ್ಕೆ ಉತ್ತರ ಕೂಡ ನೀಡುತ್ತೇನೆ ಎಂದು ಕಿಡಿಕಾರಿದರು
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…