Featured

ನಾನು ತಪ್ಪು ಮಾಡಿಲ್ಲ, ಯಾವುದಕ್ಕೂ ಹೆದರಲ್ಲ,ಇಡಿ ನೊಟಿಸ್‍ಗೆ ಉತ್ತರ ಕೂಡ ನೀಡುತ್ತೇನೆ : ಡಿ.ಕೆ ಶಿ -Vishwanews24

ಬೆಂಗಳೂರು: ಇಡಿ ಸಮನ್ಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಡಿ.ಕೆ ಶಿವಕುಮಾರ್ , ನಿಮ್ಮೆಲ್ಲರಿಗೂ ಅಭಿನಂದನೆಗಳು. ಆಗಸ್ಟ್ 2 2017ರಿಂದ ನನ್ನ ಬಗ್ಗೆ ವಿವಿಧ ರೀತಿಯಲ್ಲಿ ನೀವೆಲ್ಲಾ ವ್ಯಾಖ್ಯಾನ ಮಾಡಿದ್ದೀರಿ. ಪ್ರ, ಕೆಲವರು ಇರೋ ವಿಚಾರವನ್ನ ತಿರುಚಿ ತಮ್ಮದೆಯಾದ ರೀತಿಯಲ್ಲಿ ಕಲ್ಪನೆ ಮಾಡಿಕೊಂಡಿದ್ದೀರಿ. ನಿಮ್ಮ ಅನುಕೂಲಕ್ಕೆ ಯಾವ ರೀತಿ ಬಿಂಬಿಸಬೇಕೋ ಹಾಗೆ ಬಿಂಬಿಸಿದ್ದೀರಿ ಎಂದರು.

ಪಕ್ಷದ ನಿಷ್ಠಾವಂತ ಸೈನಿಕನ ರೀತಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ಗುಜರಾತ್, ಮಹಾರಾಷ್ಟ್ರ ಹಾಗೂ ನಮ್ಮ ಶಾಸಕರನ್ನು ಕಾಪಾಡುವ ಜವಾಬ್ದಾರಿ ನಿಭಾಯಿಸಿಕೊಂಡು ಬಂದಿದ್ದೇನೆ. ಕಳೆದ 40 ವರ್ಷದಿಂದ ನನ್ನದೆ ರೀತಿಯಲ್ಲಿ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಕೆಲವೊಮ್ಮೆ ಟೀಕೆ ಮಾಡಿರಬಹುದು, ಕೆಲವೊಮ್ಮೆ ಸಹಾಯ ಮಾಡಿರಬಹುದು. ನನ್ನ ಹೋರಾಟದಲ್ಲಿ ಕೆಲವರು ಸಂತೋಷ ಪಟ್ಟಿರಬಹುದು, ಕೆಲವರು ದು:ಖ ಪಟ್ಟಿರಬಹುದು. ಪಕ್ಷಕ್ಕಾಗಿ ನಿರಂತರವಾಗಿ ಪ್ರಾಮಾಣಿಕೆಯಿಂದ ಕೆಲಸ ಮಾಡಿಕೊಂಡು ಬಂದಿದ್ದೇನೆ. ಆದರೆ ಈಗ ನನ್ನ ಮೇಲೆ, ನನ್ನ ಕುಟುಂಬ ಹಾಗೂ ಸ್ನೇಹಿತರ ಮೇಲೆ ಇಡಿ ದಾಳಿ ನಡೆಸಿದೆ. ಈ ಬಗ್ಗೆ ನಾನು ನಮ್ಮ ಶಾಸಕರ ಜೊತೆ ರೆಸಾರ್ಟಿನಲ್ಲಿದ್ದಾಗ ನೀವು ತೋರಿಸಿದ್ದೀರಿ ಎಂದು ತಿಳಿಸಿದರು.

ಇದನ್ನು ಕಾನೂನು ಚೌಕಟ್ಟಿನಲ್ಲೂ ಎದುರಿಸಬೇಕಾಗುತ್ತೆದೆ, ರಾಜಕೀಯವಾಗಿಯೂ ಎದುರಿಸ ಬೇಕಾಗುತ್ತದೆ. ನಾನು ತಪ್ಪು ಮಾಡಿಲ್ಲ, ಕೊಲೆ ಮಾಡಿಲ್ಲ, ಮೋಸ ಮಾಡಿಲ್ಲ. ನ್ಯಾಯಯುತವಾಗಿ ದುಡಿದಿದ್ದೇನೆ, ಬದುಕಿದ್ದೇನೆ. ಷಡ್ಯಂತ್ರಗಳನ್ನು ಮಾಡಿ ಈ ಪ್ರಕರಣದಲ್ಲಿ ಸಿಲುಕಿಸಿದ್ದಾರೆ. ನ್ಯಾಯಯುತವಾಗಿ ಹೋರಾಡುತ್ತೇನೆ ಎಂದು ಹೇಳಿದರು.

ನಾನು ಹೆದರಿಕೊಂಡು ಹೋಗುವ ಕೆಂಪೇಗೌಡನ ಮಗನಲ್ಲ. ನಾನು ಕಾನೂನಾಗಿ, ರಾಜಕೀಯವಾಗಿ ಹಾಗೂ ಸಾಮಾಜಿಕವಾಗಿ ಎದುರಿಸುತ್ತೇನೆ. ನಮ್ಮ ಮನೆಗಳಲ್ಲಿ ಸಿಕ್ಕ ಹಣದ ಬಗ್ಗೆ ನಾವು ಸಾಕ್ಷಿ ಕೊಡುತ್ತೇವೆ. ಆದರೆ ಬಿಜೆಪಿ ಆಪರೇಷನ್ ಮಾಡಿದಾಗ ಕೋಟಿಗಟ್ಟಲೆ ಹಣದ ವ್ಯವಹಾರ ಮಾಡಿರುವ ಬಗ್ಗೆ ಯಾಕೆ ಯಾರು ಪ್ರಶ್ನಿಸಿಲ್ಲ. ಅವರಿಗೆ ಯಾಕೆ ನೋಟಿಸ್ ಕೊಟ್ಟಿಲ್ಲ. ಸದನದಲ್ಲಿ ಬಹಿರಂಗವಾಗಿಯೇ ಬಿಜೆಪಿ ಕೋಟಿಗಟ್ಟಲೇ ಹಣದ ಆಮಿಷ ಒಡ್ಡಿರುವ ಬಗ್ಗೆ ನಮ್ಮ ನಾಯಕರು ಹೇಳಿದ್ದಾರೆ. ಆದರೂ ಬಿಜೆಪಿ ಮೇಲೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಒಬ್ಬರಿಗೆ ಒಂದು ನ್ಯಾಯ, ಇನ್ನೊಬ್ಬರಿಗೆ ಒಂದು ನ್ಯಾಯ ಅಂದರೆ ಹೇಗೆ? ನಾನು ಯಾವುದಕ್ಕೂ ಹೆದರಲ್ಲ. ನಾನು ತಪ್ಪು ಮಾಡಿಲ್ಲ. ಇಡಿ ನೊಟಿಸ್‍ಗೆ ಗೌರವಿಸುತ್ತೇನೆ, ಅದಕ್ಕೆ ಉತ್ತರ ಕೂಡ ನೀಡುತ್ತೇನೆ ಎಂದು ಕಿಡಿಕಾರಿದರು

Vishwa News 24

Recent Posts

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ -vishwanews24

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…

11 hours ago

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

2 days ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

2 days ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

2 days ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

2 days ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

2 days ago